ನ್ಯೂಸ್ ನಾಟೌಟ್ :ಹಲವು ಕನಸುಗಳನ್ನು ಕಾಣುತ್ತಾ ಮದುವೆಯಾಗಿದ್ದ ಹೆಣ್ಣೋರ್ವಳು ದುರಂತ ಸಾವಿಗೀಡಾಗಿದ್ದಾಳೆ. ಗಂಡನ ವಿಕೃತ ಕಾಮದಿಂದಾಗಿ ನವವಿವಾಹಿತೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬಗ್ಗೆ ವರದಿಯಾಗಿದೆ. ವಿಶಾಖಪಟ್ಟಣಂದ ಗೋಪಾಲಪಟ್ಟಣದ ನಂದಮೂರಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು 28 ವರ್ಷದ ವಸಂತ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ.
ಏನಿದು ಘಟನೆ?
ತನ್ನ ಪತಿ ನಾಗೇಂದ್ರಬಾಬು ಪ್ರತಿದಿನ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಟಾರ್ಚರ್ ಮಾಡುತ್ತಿದ್ದಾನೆ ಎಂದು ಆಕೆ ಕುಟುಂಬಸ್ಥರ ಜತೆ ಆಳಲು ತೊಡಿಕೊಂಡಿದ್ದಳು. ಈ ಕುರಿತಾಗಿ ನಾಗೇಂದ್ರಬಾಬು ಜತೆ ಮಾತನಾಡುವುದಾಗಿ ಹೇಳಿದ್ದರು. ಆದರೆ, ಇಷ್ಟರಲ್ಲೇ ವಸಂತ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ನಾಗೇಂದ್ರಬಾಬುನೇ ನಮ್ಮ ಮಗಳಿಗೆ ಟಾರ್ಚರ್ ಕೊಟ್ಟು ಕೊಟ್ಟು ಕೊಲೆ ಮಾಡಿದ್ದಾನೆ ಎಂದು ಮೃತೆ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸರು, ಪತಿ ನಾಗೇಂದ್ರ ಬಾಬುನನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದಾರೆ.
ವಸಂತಾ ಹಲವು ಕನಸು ಇಟ್ಟುಕೊಂಡು 34 ವರ್ಷದ ನಾಗೇಂದ್ರ ಬಾಬುವನ್ನು ಮದುವೆಯಾಗಿದ್ದಳು. ಆದ್ರೆ, ಮದುವೆಯಾದ ಹೊಸತರದಲ್ಲಿ ನಾಗೇಂದ್ರ ಬಾಬುನ ವಿಕೃತ ಮನಸ್ಥಿತಿ ಬಯಲಾಗಿದೆ. ನಾಗೇಂದ್ರ ಬಾಬು ಲೈಂಗಿಕ ವಿಡಿಯೋಗಳನ್ನು ತೋರಿಸಿ ವಸಂತಾಳಿಗೆ ಪ್ರತಿದಿನ ಚಿತ್ರಹಿಂಸೆ ನೀಡಿದ್ದಾನೆ.
ಕುಟುಂಬಸ್ಥರು ಈ ಬಗ್ಗೆ ಮಾತನಾಡಿ ಬಗೆಹರಿಸೋಣ ಎಂದು ಸಮಾಧಾನಪಡಿಸಿದ್ದರು.ಆದ್ರೆ, ನಾಗೇಂದ್ರ ಬಾಬುನ ಅಟ್ಟಹಾಸ ದಿನ ಕಳೆದಂತೆ ಹೆಚ್ಚಾಗುತ್ತಲೇ ಇತ್ತು. ಇದರಿಂದ ಬೇಸತ್ತ ವಸಂತಾ ಎಲ್ಲದಕ್ಕೂ ತಾನೇ ಇರಬಾರದು ಎಂದು ಸಾವಿನ ಹಾದಿ ಹಿಡಿದಿದ್ದಾಳೆ. ಈ ಮೂಲಕ ಹಲವು ಕನಸು ಕಂಡಿದ್ದ ವಸಂತಾ ಸಾವಿನ ಕದ ತಟ್ಟುವಂತಾಗಿದೆ.