ಕ್ರೈಂ

ಕಾರು ಚಾಲಕನೊಂದಿಗೆ ಅನೈತಿಕ ಸಂಬಂಧ! ಆತನನ್ನು ಕೊಲ್ಲಲು ಬಂದ ಪತಿ ಪತ್ನಿಯನ್ನೇ ಕೊಂದ!

177

ನ್ಯೂಸ್‌ನಾಟೌಟ್‌: ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯನ್ನು ಹತ್ಯೆಗೈದ ವ್ಯಕ್ತಿಯೊಬ್ಬ ಎರಡೂವರೆ ವರ್ಷದ ಮಗನನ್ನು ಹತ್ಯೆಗೈಯಲು ಯತ್ನಿಸಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಸಾರಾಯಿಪಾಳ್ಯದಲ್ಲಿ ಸೋಮವಾರ (ಮಾರ್ಚ್ 20) ರಾತ್ರಿ ನಡೆದಿದೆ.

ದಂಪತಿಗಳಿಗೆ ಮದುವೆಯಾಗಿ 14 ವರ್ಷಗಳಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಪಶ್ಚಿಮಬಂಗಾಳದ ಮೂಲದವರಾದ ಇವರು, 2013ರಲ್ಲಿ ಬೆಂಗಳೂರಿನ ಕೆಜಿ ಹಳ್ಳಿಯಲ್ಲಿ ನೆಲೆಯೂರಿದ್ದರು.

ಕಾರು ಚಾಲಕ ಸೈಯದ್ ನದೀಮ್ ಎಂಬಾತನೊಂದಿಗೆ ತಹಸೀನ್ ವಿವಾಹೇತರ ಸಂಬಂಧ ಹೊಂದಿರುವ ವಿಚಾರ ತಿಳಿದ ಸೋಹೆಲ್, ಕುಟುಂಬವನ್ನು ಕೋಲ್ಕತಾಗೆ ಸ್ಥಳಾಂತರಿಸಿದ್ದ. ಆದರೆ, ತಹಸೀನ್ ಪತಿಯನ್ನು ತೊರೆದು ಬೆಂಗಳೂರಿಗೆ ಬಂದು ನದೀಮ್ ಜೊತೆಗೆ ವಾಸವಿದ್ದಳು.

ವಿಚಾರ ತಿಳಿದ ಸೋಹೆಲ್ ಸೋಮವಾರ ರಾತ್ರಿ ಸಾರಾಯಿಪಾಳ್ಯದ ಅಫ್ಜಲ್ ಲೇಔಟ್‌ನಲ್ಲಿರುವ ನದೀಮ್ ಮನೆಗೆ ಭೇಟಿ ನೀಡಿ ಜಗಳವಾಡಿದ್ದಾರೆ. ಚಾಕುವಿನಿಂದ ನದೀಮ್ ಮೇಲೆ ಹಲ್ಲೆ ನಡೆಸಿದ್ದಾನೆ.

ನದೀಮ್ ನನ್ನು ಕೊಲ್ಲುವ ಯತ್ನದಲ್ಲಿ ತಹಸೀನ್ ಕತ್ತು ಸೀಳಿದ್ದಾನೆ. ಇದೇ ವೇಳೆ ಆಕೆಯ ಮಗನ ತೊಡೆಗೂ ಇರಿದಿದ್ದಾನೆ. ಗಲಾಟೆಯ ಸದ್ದು ಕೇಳಿದ ನೆರೆಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೂಡಲೇ ಬಾಕಲನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ, ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ತಹ್ಸೀನ್ ಬೇಬಿ ಎಂದು ಗುರುತಿಸಲಾಗಿದ್ದು, ಆಕೆಯ ಪತಿ ಶೇಖ್ ಸೊಹೆಲ್ ನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

See also  ಬೆಳಿಗ್ಗೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿ, ಸಂಜೆ ಮಹಿಳೆಯರ ಮೇಲೆ ಬಿದ್ದ ಕಂಬ..! 4 ತಿಂಗಳ ಗರ್ಭಿಣಿ ಸೇರಿ ಇಬ್ಬರು ಸಾವು..!
  Ad Widget   Ad Widget   Ad Widget   Ad Widget   Ad Widget   Ad Widget