ಬೆಂಗಳೂರು

ಐಪಿಎಸ್‌ ಅಧಿಕಾರಿಗಳ ದಿಢೀರ್ ವರ್ಗಾವಣೆ! ಪರ-ವಿರೋಧ ಚರ್ಚೆ!

214

ನ್ಯೂಸ್‌ನಾಟೌಟ್‌: ಬೆಂಗಳೂರು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಮಯದಲ್ಲೇ ರಾಜ್ಯ ಸರ್ಕಾರ ಇಬ್ಬರು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರಿನ ವೈಟ್‌ಫೀಲ್ಡ್‌ ಡಿಸಿಪಿ ಗಿರೀಶ್‌ ಮತ್ತು ದಾವಣಗೆರೆ ಪೊಲೀಸ್‌ ಆಯುಕ್ತ ಸಿ.ಬಿ.ರಿಷ್ಯಂತ್‌ ಇವರಿಬ್ಬರನ್ನು ವರ್ಗಾವಣೆ ಮಾಡಲಾಗಿದೆ.

ಇದೀಗ ಬೆಂಗಳೂರಿನ ವೈಟ್‌ಫೀಲ್ಡ್‌ ವಿಭಾಗಕ್ಕೆ ಧರ್ಮೇಂದ್ರ ಕುಮಾರ್‌ ಮೀನಾ ನೂತನ ಡಿಸಿಪಿಯಾಗಿ ನೇಮಕಗೊಂಡಿದ್ದು, ಹಾಗೂ ದಾವಣಗೆರೆ ನೂತನ ನೂತನ ಎಸ್‌ಪಿಯಾಗಿ ಅರುಣ್‌ ಕೆ. ಎನ್ನುವವರು ನೇಮಕಗೊಂಡಿದ್ದಾರೆ.

ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ. ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಚುನಾವಣೆ ಹೊತ್ತಲ್ಲಿ ವರ್ಗಾವಣೆ ಮಾಡಿರುವುದು ಹಲವರ ಚರ್ಚೆಗೆ ಕಾರಣವಾಗಿದೆ. ಇದೀಗ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ತರಬೇತಿ ಪ್ರಾಂಶುಪಾಲರಾಗಿದ್ದ ಡಾ.ಅರುಣ್ ಅವರನ್ನು ದಾವಣಗೆರೆಯ ನೂತನ ಎಸ್‌ಪಿಯಾಗಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ರಿಷ್ಯಂತ್ ಅವರಿಗೆ ಯಾವುದೇ ಸ್ಥಳ ನಿಗದಿ ಪಡಿಸಿಲ್ಲ.

See also  ಸರ್ಕಾರಿ ಶಾಲೆಗಳಿಗೂ ಸಿಗಲಿದೆಯಾ ಉಚಿತ ವಿದ್ಯುತ್ ಭಾಗ್ಯ..? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget