ಕ್ರೈಂದೇಶ-ಪ್ರಪಂಚದೇಶ-ವಿದೇಶಬೆಂಗಳೂರು

ರಾತ್ರಿ ಪೊಲೀಸರ ಮೇಲೆ ನೈಜೀರಿಯನ್ ಪ್ರಜೆಗಳಿಂದ ಹಲ್ಲೆ..! ತಪ್ಪಿಸಿಕೊಂಡು ಮುಖ್ಯರಸ್ತೆಗೆ ಓಡಿದ ಸಿಸಿಬಿ ಪೊಲೀಸರು..! ಆರೋಪಿಗಳು ಅರೆಸ್ಟ್

ನ್ಯೂಸ್ ನಾಟೌಟ್: ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಬಂಧಿಸಲು ಬಂದಿದ್ದ ಸಿಸಿಬಿ ಪೊಲೀಸರ ಮೇಲೆ ಹಲ್ಲೆ ಮಾಡಿ ನೈಜೀರಿಯಾ ಪ್ರಜೆಗಳು ಗೂಂಡಾಗಿರಿ ನಡೆಸಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿ ಗುರುವಾರ(ಎ.೧೮) ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದೆ ಬಾಗಲಗುಂಟೆ ಸಮೀಪ ವಿದೇಶಿ ಪ್ರಜೆಯನ್ನು ಬಂಧಿಸಿ 4 ಕೆ.ಜಿ ಎಡಿಎಂಎಯನ್ನು ಸಿಸಿಬಿ ಜಪ್ತಿ ಮಾಡಿತ್ತು.

ಈ ಪ್ರಕರಣದ ತನಿಖೆ ಮುಂದುವರೆಸಿದಾಗ ಯಲಹಂಕದ ಪ್ರಕೃತಿ ಲೇಔಟ್‌ನ ಮನೆಯಲ್ಲಿ ಆರೋಪಿಯ ಸಹಚರರು ನೆಲೆಸಿರುವ ಮಾಹಿತಿ ತನಿಖಾಧಿಕಾರಿ ಸುಬ್ರಹ್ಮಣ್ಯಸ್ವಾಮಿ ಅವರಿಗೆ ಲಭಿಸಿತು. ತಕ್ಷಣ‍ವೇ ಗುರುವಾರ ರಾತ್ರಿ ಪೆಡ್ಲರ್‌ಗಳ ಬಂಧನಕ್ಕೆ ಸಿಬ್ಬಂದಿ ಜತೆ ತೆರಳಿದ್ದರು. ಆಗ ಸಿಂಗನಾಯಕನಹಳ್ಳಿ ಬಳಿಯ ಭಗಿನಿ ರೆಸ್ಟೋರೆಂಟ್‌ನಲ್ಲಿ ಸಿಸಿಬಿಗೆ ಓರ್ವ ಆರೋಪಿ ಪತ್ತೆಯಾಗಿದ್ದಾನೆ. ರೆಸ್ಟೋರೆಂಟ್‌ನಿಂದ ಹೊರಬಂದ ಕೂಡಲೇ ಆತನನ್ನು ಹಿಂಬಾಲಿಸಿದ ಸಿಸಿಬಿ ತಂಡ ಮಾವಳ್ಳಿಪುರದಲ್ಲಿರುವ ಮನೆಗೆ ನುಗ್ಗಿ ಬಂಧಿಸಲು ಮುಂದಾಗಿದ್ದಾರೆ. ಆ ವೇಳೆ ಮನೆಯಲ್ಲಿದ್ದ ಇಬ್ಬರು ನೈಜೀರಿಯನ್‌ ಪ್ರಜೆಗಳು, ತಮ್ಮನ್ನು ಬಂಧಿಸಲು ಬಂದ ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ.

ಆಗ ತಾವು ಸಿಸಿಬಿ ಪೊಲೀಸರು ಎಂದು ಗುರುತಿ ಚೀಟಿ ತೋರಿಸಿದರೂ ಕ್ಯಾರೇ ಎನ್ನದೆ ತನಿಖಾ ತಂಡದ ಜತೆ ಗಲಾಟೆ ಶುರು ಮಾಡಿದ್ದಾರೆ. ತಕ್ಷಣವೇ ವಾಟ್ಸ್ ಆ್ಯಪ್‌ನಲ್ಲಿ ತಮ್ಮ ನಾಲ್ವರು ಸ್ನೇಹಿತರಿಗೆ ಸಂದೇಶ ಕಳುಹಿಸಿ ಆರೋಪಿಗಳು ಕರೆಸಿಕೊಂಡಿದ್ದಾರೆ. ನಂತರ ಪೊಲೀಸರನ್ನು ಮನೆಯಿಂದ ಹೊರಗೆ ತಳ್ಳಿಕೊಂಡು ಬಂದು ವಿದೇಶಿ ಪ್ರಜೆಗಳು ಥಳಿಸಿದ್ದಾರೆ. ಡ್ರ್ಯಾಗರ್‌ ಹಾಗೂ ದೊಣ್ಣೆಗಳಿಂದ ಹಲ್ಲೆ ನಡೆಸಲು ಆರೋಪಿಗಳು ಯತ್ನಿಸಿದ್ದಾರೆ. ಆಗ ಅವರಿಂದ ತಪ್ಪಿಸಿಕೊಂಡು ಮುಖ್ಯರಸ್ತೆಗೆ ಸಿಸಿಬಿ ಪೊಲೀಸರು ಓಡಿ ಬಂದಿದ್ದಾರೆ ಎನ್ನಲಾಗಿದೆ. ಅಷ್ಟರಲ್ಲಿ ಪೊಲೀಸ್ ನಿಯಂತ್ರಣ ಕೊಠಡಿಗೆ (ನಮ್ಮ 122) ಎಚ್‌ಸಿ ಶಶಿಧರ್ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ತೆರಳಿದ್ದಾರೆ.

ಸಮವಸ್ತ್ರದಲ್ಲಿ ಬಂದ ರಾಜಾನಕುಂಟೆ ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದಲ್ಲದೆ ಮಚ್ಚು ಹಾಗೂ ದೊಣ್ಣೆಗಳಿಂದ ವಿದೇಶಿ ಪ್ರಜೆಗಳು ದಾಳಿ ಮಾಡಿದ್ದಾರೆ. ಕೂಡಲೇ ಆ ಗಲಾಟೆಯಿಂದ ತಪ್ಪಿಸಿಕೊಂಡು ಪೊಲೀಸರು ಸುರಕ್ಷಿತರಾಗಿದ್ದಾರೆ. ಗಾಯಾಳು ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಈ ಗೂಂಡಾಗಿರಿ ಪ್ರಕರಣ ಸಂಬಂಧ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

Related posts

ನನ್ನ ಸಹಿಯನ್ನೇ ತಿರುಚಿ, ಭ್ರಷ್ಟಾಚಾರ ಆರೋಪ ಮಾಡಲಾಗುತ್ತಿದೆ ಎಂದ ಹೆಚ್.ಡಿ.ಕೆ..! ಒಂದು ದಿನವಾದ್ರೂ ನನ್ನನ್ನು ಜೈಲಿಗೆ ಹಾಕುವ ಪ್ಲ್ಯಾನ್‌ ಎಂದ ಕುಮಾರಸ್ವಾಮಿ..!

ಸಹೋದರರಿಂದಲೇ ಸಹೋದರಿಯ ಅತ್ಯಾಚಾರ, ಬೆಚ್ಚಿ ಬೀಳಿಸಿದ ಘಟನೆ ನಡೆದಿದ್ದೆಲ್ಲಿ?

ಜೈಲಿನಲ್ಲಿ ದರ್ಶನ್ ನನ್ನು ಭೇಟಿಯಾಗಿ, ತಬ್ಬಿಕೊಂಡಿದ್ದೆ ಎಂದಿದ್ದ 21 ವರ್ಷಗಳಿಂದ ಜೈಲಿನಲ್ಲಿದ್ದ ಸಿದ್ಧಾರೂಢ..! ಜೈಲಾಧಿಕಾರಿಗಳಿಗೆ ನೋಟಿಸ್..! ಸಿದ್ಧಾರೂಢನಿಗೆ ಮತ್ತೆ ಕಂಟಕ..!