ರಾಜಕೀಯವೈರಲ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿ ಪ್ರಚಾರದ ವೇಳೆ ಬಾಡೂಟ, ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ನಾನ್‍ ವೆಜ್ ಊಟ ವಶಕ್ಕೆ ..! ಚೆಲ್ಲಿದ ಊಟವನ್ನೇ ತಿಂದ ಕೆಲವರು!

161

ನ್ಯೂಸ್ ನಾಟೌಟ್: ಕಾಂಗ್ರೆಸ್ ಅಭ್ಯರ್ಥಿ ಪ್ರಚಾರದ ವೇಳೆ ಬಾಡೂಟ ಆಯೋಜನೆ ಮಾಡಿದ್ದು, ಫ್ಲೈಯಿಂಗ್ ಸ್ಕ್ವಾಡ್ ತಂಡ ದಾಳಿ ನಡೆಸಿದೆ. ದಾಳಿ ಬಳಿಕ ತಂಡವು ಬಾಡೂಟವನ್ನು ವಶಕ್ಕೆ ಪಡೆದು ನಾಶ ಮಾಡಿದೆ ಎನ್ನಲಾಗಿದೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಎಚ್.ಡಿ.ರೇವಣ್ಣ ಅವರ ಕುಮ್ಮಕ್ಕಿನಿಂದ ದಾಳಿ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಕೋಡಿಹಳ್ಳಿ ಗ್ರಾಮಕ್ಕೆ ಚುನಾವಣೆ ಪ್ರಚಾರಕ್ಕೆ ಆಗಮಿಸುವವರಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಪ್ರಚಾರ ಸಭೆಗೆ ಬರುವವರಿಗೆ ಬಾಡೂಟ ವ್ಯವಸ್ಥೆ ಮಾಡಿದ್ದರು. ಆದರೆ ಈ ವಿಚಾರ ತಿಳಿದು ಎಫ್‍ಎಸ್‍ಟಿ ತಂಡ ಗ್ರಾಮಕ್ಕೆ ಭೇಟಿ ನೀಡಿದೆ.

ಅಲ್ಲದೇ ಪರಿಶೀಲಿಸಿದಾಗ ಬಾಡೂಟ ವ್ಯವಸ್ಥೆ ಮಾಡಿರುವುದು ಬೆಳಕಿಗೆ ಬಂದಿದೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನಲೆಯಲ್ಲಿ ಎಫ್‍ಎಸ್‍ಟಿ ತಂಡವು ನಾನ್‍ವೆಜ್ ಊಟವನ್ನು ವಶಕ್ಕೆ ಪಡೆದಿದೆ. ನಂತರ ರಸ್ತೆಗೆ ಬದಿಗೆ ಸುರಿದು ನಾಶ ಮಾಡಿ ಬಳಿಕ ಪೊಲೀಸ್ ಠಾಣೆಗೆ ತಂಡ ದೂರು ನೀಡಿದೆ. ಬಾಡೂಟ ಆಯೋಜನೆ ಸಂಬಂಧ ಗ್ರಾಮದ ಓರ್ವನ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೆಲ್ಲಿದ ಊಟವನ್ನೇ ಕೆಲವರು ತಿಂದ ಘಟನೆಯೂ ಇಲ್ಲಿ ನಡೆದಿದೆ ಎನ್ನಲಾಗಿದೆ.

See also  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಕೋಟಿ-ಕೋಟಿ ಹಣ ವಂಚನೆ..! ತಮಿಳುನಾಡಿಂದ ಬಂದವಳು ಸಿಕ್ಕಿಬಿದ್ದಿದ್ದೇಗೆ..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget