ನ್ಯೂಸ್ ನಾಟೌಟ್: ಈ ಹಿಂದೆ ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಆಡಳಿತ ಮಂಡಳಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಇದೀಗ ಅಕಾಲಿಕವಾಗಿ ನಿಧನ ಹೊಂದಿದ ದಿ. ಗಾಂಧಿ ಪ್ರಸಾದ್ ಬಂಗಾರಕೋಡಿ ಮತ್ತು ದಿ.ರತ್ನಾಕರ ದೊಡ್ಕಜೆ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ತಾ.10 ರಂದು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಸಂಸ್ಥೆಯ ಅದ್ಯಕ್ಷ ಅನಂತ್ ಊರುಬೈಲು ನುಡಿನಮನ ಸಲ್ಲಿಸಿದರು. ಸಂಘದ ಉಪಾಧ್ಯಕ್ಷ ರಾಜಾರಾಮ ಕಳಗಿ ,ಸಿಇಒ ಬಿ.ಕೆ.ಆನಂದ ,ಆಡಳಿತ ಮಂಡಳಿ ನಿರ್ದೇಶಕರು ,ಸಿಬ್ಬಂದಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.