Uncategorized

ನ್ಯಾಯದೇವತೆಯ ಹೊಸ ರೂಪ ಅನಾವರಣ..! ಇನ್ನು ಮುಂದೆ ನ್ಯಾಯದೇವತೆಯ ಕಣ್ಣಿಗಿಲ್ಲ ಕಪ್ಪು ಪಟ್ಟಿ..!

ನ್ಯೂಸ್ ನಾಟೌಟ್: ಒಂದು ಕೈಯಲ್ಲಿ ತಕ್ಕಡಿ, ಮತ್ತೊಂದು ಕೈಯಲ್ಲಿ ಸಂವಿಧಾನದ ಪ್ರತಿ ಹಿಡಿದಿರುವ ನ್ಯಾಯದೇವತೆಯ ಕಣ್ಣಿಗೆ ಕಟ್ಟಿರುವ ಪಟ್ಟಿಯನ್ನು ತೆಗೆಯಲಾಗಿದ್ದು, ಹೊಸ ನ್ಯಾಯದೇವತೆಯ ಮೂರ್ತಿ ಅನಾವರಣ ಗೊಳಿಸಲಾಗಿದೆ.

ಇದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಗ್ರಂಥಾಲಯದಲ್ಲಿ ಸ್ಥಾಪಿಸಲಾಗಿರುವ ನ್ಯಾಯದೇವತೆಯ ಪ್ರತಿಮೆಯ ಹೊಸ ರೂಪ.
ನ್ಯಾಯದೇವತೆಯ ಹೊಸ ಪ್ರತಿಮೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದ್ದು, ಖಡ್ಗ ಹಿಡಿದಿರುವ ಕೈಯಲ್ಲಿ ಸಂವಿಧಾನ ಪ್ರತಿಯಿದೆ. ಕಣ್ಣಿಗೆ ಕಟ್ಟಿರುವ ಪಟ್ಟಿಯನ್ನು ತೆಗೆಯಲಾಗಿದೆ ಎಂದು ಆಲ್‌ ಇಂಡಿಯಾ ‌ರೇಡಿಯೊ ವರದಿ ಮಾಡಿದೆ.

ವಸಾಹತುಶಾಹಿ ಪರಂಪರೆಯನ್ನು ಕೈಬಿಟ್ಟು ಭಾರತ ಮುಂದುವರಿಯಬೇಕಾಗಿದೆ. ನ್ಯಾಯದೇವತೆ ಕುರುಡಲ್ಲ, ಅವಳು ಎಲ್ಲರನ್ನು ಸಮಾನವಾಗಿ ನೋಡುತ್ತಾಳೆ ಎಂಬ ಸಂದೇಶವನ್ನು ರವಾನಿಸಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರು ಈ ಬದಲಾವಣೆಗೆ ಸೂಚಿಸಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಈ ಹಿಂದೆ ಇದ್ದ ನ್ಯಾಯದೇವತೆಯ ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಲಾಗಿತ್ತು. ಸಂಪತ್ತು, ಅಧಿಕಾರ, ಸ್ಥಾನಮಾನವನ್ನು ಪರಿಗಣಿಸದೇ ಎಲ್ಲರಿಗೂ ಸಮಾನ ನ್ಯಾಯವನ್ನು ದೊರಕಬೇಕು ಎಂಬ ಆಶಯವನ್ನು ಇದು ಸೂಚಿಸುತ್ತಿತ್ತು. ಅಲ್ಲದೇ ಒಂದು ಕೈಯಲ್ಲಿ ತಕ್ಕಡಿ ಹಿಡಿದರೆ ಮತ್ತೊಂದು ಕೈಯಲ್ಲಿ ಖಡ್ಗವಿತ್ತು. ಈಗಿನ ಮೂರ್ತಿ ಬಿಳಿ ಬಣ್ಣದಲ್ಲಿದ್ದು ಒಂದು ಕೈಯಲ್ಲಿ ತಕ್ಕಡಿ, ಮತ್ತೊಂದು ಕೈಯಲ್ಲಿ ಸಂವಿಧಾನದ ಪ್ರತಿ ಮತ್ತು ಕಣ್ಣಿನ ಬಟ್ಟೆಯನ್ನು ತೆಗೆಯಲಾಗಿದೆ.

Click

https://newsnotout.com/2024/10/cctv-kannada-news-father-reinvestigation/
https://newsnotout.com/2024/10/yathnal-kannada-news-arrest-warrent-kana-ka/

Related posts

ಕೊಳದ ಮಠದ ಶಾಂತವೀರ ಸ್ವಾಮಿಗಳು ಇನ್ನಿಲ್ಲ

ಕೆಂಡ ಸೇವೆ ವೇಳೆ ಕೆಂಡದ ರಾಶಿಗೆ ಬಿದ್ದ ಅಯ್ಯಪ್ಪ ಮಾಲಾಧಾರಿ..!ಏನಿದು ಘಟನೆ?

ಪ್ರವೀಣ್ ನೆಟ್ಟಾರ್‌ ಅಕ್ಷಯ ಚಿಕನ್ ಸೆಂಟರ್ ಪುನರಾರಂಭ