ರಾಜಕೀಯ

ಬಿಜೆಪಿ ಬೆಂಬಲಿಸುವ ಬಿಷಪ್‌ ಹೇಳಿಕೆಗೆ ವಿಪಕ್ಷಗಳು ಕಿಡಿ

236

ನ್ಯೂಸ್‌ನಾಟೌಟ್‌: ತಲಶ್ಶೇರಿ ಆರ್ಚ್ ಡಯಾಸಿಸ್‌ನ ಕೆಥೊಲಿಕ್ ರೈತರ ಸಮಾವೇಶದಲ್ಲಿ ಬಿಜೆಪಿಗೆ ಬೆಂಬಲ ನೀಡುವ ವಿಚಾರದಲ್ಲಿ ರೋಮನ್ ಕೆಥೊಲಿಕ್ ಚರ್ಚ್‌ ತಲಸ್ಸೆರಿ ಆರ್ಚ್ ಬಿಷಪ್ ಮಾರ್ ಜೋಸೆಫ್ ಪಾಂಪ್ಲಾನಿ ನೀಡಿದ ಹೇಳಿಕೆಗೆ ವಿಪಕ್ಷಗಳು ಕಿಡಿ ಕಾರಿವೆ.

ತಲಶ್ಶೇರಿಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಕೆಥೊಲಿಕ್ ರೈತರ ಸಮಾವೇಶದಲ್ಲಿ ಮಾತನಾಡಿದ ಆರ್ಚ್ ಬಿಷಪ್ ಜೋಸೆಫ್ ಪಂಪ್ಲಾನಿ, ಕೇಂದ್ರ ಸರ್ಕಾರ ರಬ್ಬರ್ ಬೆಲೆಯನ್ನು ಕಿಲೋಗ್ರಾಂಗೆ 300 ರೂ.ಗೆ ಏರಿಸಿದರೆ ಚರ್ಚ್‌ನಲ್ಲಿ ನಂಬಿಕೆ ಇಟ್ಟವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇರಳದಲ್ಲಿ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂದು ಹೇಳಿದ್ದರು. ಅವರ ಈ ಹೇಳಿಕೆಗೆ ಈಗ ಭಾರೀ ವಿರೋಧ ವ್ಯಕ್ತವಾಗಿದೆ.

ಬಿಷಪ್ ಅವರ ಈ ಹೇಳಿಕೆಗೆ ಸಿಪಿಎಂ ಮತ್ತು ಕಾಂಗ್ರೆಸ್ ಕಿಡಿಕಾರಿದ್ದು, ಉತ್ತರ ಭಾರತದ ರಾಜ್ಯಗಳಲ್ಲಿ ಚರ್ಚ್ ಮತ್ತು ಪಾದ್ರಿಗಳ ವಿರುದ್ಧ ನಡೆದ ದಾಳಿಯನ್ನು ಬಿಷಪ್ ಮರೆತಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ. ಬಿಷಪ್ ಅವರ ಹೇಳಿಕೆ, ಕೇರಳದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

See also  ಗ್ಯಾರಂಟಿ ಯೋಜನೆ ಜನರಿಗೆ ತಲುಪಿಲ್ಲ ಎಂದಾದರೆ ಮನೆಯ ಗ್ರಹಲಕ್ಷ್ಮಿಯರಲ್ಲಿ ಕೇಳಲಿ! ಸುಳ್ಯ ಬಿಜೆಪಿ ನಾಯಕರ ಟೀಕೆಗಳನ್ನು ಖಂಡಿಸಿದ ಕಾಂಗ್ರೆಸ್ ಮುಖಂಡ ಎಂ ವೆಂಕಪ್ಪ ಗೌಡ
  Ad Widget   Ad Widget   Ad Widget   Ad Widget   Ad Widget   Ad Widget   Ad Widget