Latestಕ್ರೈಂದೇಶ-ವಿದೇಶ

ಪಾಕ್ ಪ್ರಜೆಗಳನ್ನು ಪತ್ತೆ ಹಚ್ಚುವ ವೇಳೆ ಬಾಂಗ್ಲಾದ 500ಕ್ಕೂ ಹೆಚ್ಚು ಅಕ್ರಮ ವಲಸಿಗರು ಪತ್ತೆ..! ಬಂಧಿಸಿದ ಪೊಲೀಸರು..!

612
representative image

ನ್ಯೂಸ್ ನಾಟೌಟ್: ಪಹಲ್ಗಾಮ್ ನಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ನಂತರ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿತ್ತು. ಪಾಕಿಸ್ತಾನಕ್ಕೆ ರಾಜತಾಂತ್ರಿಕವಾಗಿಯೇ ಉತ್ತರವನ್ನು ನೀಡುವ ಮೂಲಕ ದಶ ದಿಕ್ಕುಗಳಿಂದ ನಿರ್ಬಂಧವನ್ನು ಹೇರಿತ್ತು. ಕೇಂದ್ರ ನಿರ್ಧಾರದ ಜತೆಗೆ ರಾಜ್ಯ ಸರ್ಕಾರಗಳು ಕೂಡ ಪಾಕ್ ಪ್ರಜೆಗಳನ್ನು ಭಾರತದಿಂದ ಹೊರಗೆ ಕಳುಹಿಸಲು ಸಿದ್ಧತೆಗಳನ್ನು ನಡೆಸಿದೆ. ಈ ತಿಂಗಳ ಒಳಗೆ ಭಾರತ ಬಿಡುವಂತೆ ಆದೇಶವನ್ನು ನೀಡಿದೆ. ಆದರೆ ಗುಜರಾತ್ (Gujarat) ಒಂದು ಹೆಜ್ಜೆ ಮುಂದೆ ಹೋಗಿದೆ. ಪ್ರಧಾನಿ ಮೋದಿ ಅವರ ತವರು ರಾಜ್ಯವಾದ ಗುಜರಾತ್​​ನಲ್ಲಿ ಬಾಂಗ್ಲಾದೇಶದಿಂದ (Bangladeshis) ಅಕ್ರಮವಾಗಿ ಭಾರತಕ್ಕೆ ಬಂದಿರುವ ಪ್ರಜೆಗಳನ್ನು ಬಂಧಿಸಿದೆ.

ರಾಜ್ಯಾದ್ಯಂತ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ, ನಕಲಿ ದಾಖಲೆಗಳೊಂದಿಗೆ ಭಾರತದಲ್ಲಿ ವಾಸಿಸುತ್ತಿರುವ 550 ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಅಹಮದಾಬಾದ್ ಮತ್ತು ಸೂರತ್‌ ನಲ್ಲಿ ಬಂಧಿಸಲಾಗಿದೆ.

ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಎಲ್ಲ ಪ್ರಕ್ರಿಯೆಗಳು ನಡೆದ ನಂತರ ಅವನ್ನು ಗಡಿಪಾರು ಮಾಡುವುದಾಗಿ ಗುಜರಾತ್​​​ ಪೊಲೀಸರು ಹೇಳಿದ್ದಾರೆ. ವಿಶೇಷ ಕಾರ್ಯಾಚರಣೆ ಗುಂಪು (SOG), ಅಪರಾಧ ಶಾಖೆ, ಮಾನವ ಕಳ್ಳಸಾಗಣೆ ವಿರೋಧಿ ಘಟಕ (AHTU), ಅಪರಾಧ ಶಾಖೆ ತಡೆ (PCB) ಮತ್ತು ಸ್ಥಳೀಯ ಪೊಲೀಸ್ ತಂಡಗಳು ಸೇರಿದಂತೆ ಅನೇಕ ಘಟಕಗಳು ಹಾಗೂ ಇಲಾಖೆಗಳು ಕಾರ್ಯಾಚರಣೆಗಳನ್ನು ನಡೆಸಿವೆ. ಬಂಧನವಾಗಿರುವ ಎಲ್ಲ ಪ್ರಜೆಗಳು ಯಾವುದೇ ಪ್ರಮುಖ ದಾಖಲೆಗಳು ಇಲ್ಲದೆ ವಾಸಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಇದರ ಜತೆಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಭಾರತದಲ್ಲಿ ವಾಸವಾಗಿದ್ದಾರೆ ಎಂದು ಹೇಳಲಾಗಿದೆ.

ಸೂರತ್‌ನಲ್ಲಿ, SOG, DCB, AHTU, PCB ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ರಾತ್ರಿ ಹೊತ್ತಿನಲ್ಲಿ ನಡೆಸಿದ ಕೂಂಬಿಂಗ್ ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಯಿತು.ಅವರು ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ನಕಲಿ ದಾಖಲೆಗಳೊಂದಿಗೆ ಸೂರತ್‌ನಲ್ಲಿ ವಾಸಿಸುತ್ತಿದ್ದರು. ತನಿಖೆಯ ನಂತರ ಅವರನ್ನು ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗುತ್ತದೆ ಎಂದು ಉಪ ಪೊಲೀಸ್ ಆಯುಕ್ತ ರಾಜ್‌ದೀಪ್ ಸಿಂಗ್ ನಕುಮ್ ಹೇಳಿದರು.

ಸುಳ್ಯ: ಪೈಚಾರಿನಲ್ಲಿ ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ..! ಪೆಟ್ರೋಲ್ ಪಂಪ್ ನಿಂದ ಲಾರಿ ರಸ್ತೆಗಿಳಿಯುತ್ತಿದ್ದ ವೇಳೆ ಘಟನೆ..!

See also  ಉಜಿರೆ: ಕಾಫಿ ಡೇನಲ್ಲಿ ನಿಲ್ಲಿಸಿದ್ದ ಬೈಕ್ ಕದ್ದ ಕಿಲಾಡಿ ಕಳ್ಳರು
  Ad Widget   Ad Widget   Ad Widget   Ad Widget