Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಪಹಲ್ಗಾಮ್ ದಾಳಿಯ ಉಗ್ರರ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ..! ಪೋಸ್ಟರ್‌ ಗಳನ್ನು ಅಂಟಿಸಿದ ಪೊಲೀಸರು..!

416

ನ್ಯೂಸ್‌ ನಾಟೌಟ್‌: ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಪೋಸ್ಟರ್‌ ಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಿಡುಗಡೆ ಮಾಡಿದ್ದು, ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಏ.22 ರಂದು ಪಹಲ್ಗಾಮ್‌ ನ ಬೈಸರನ್ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧದಲ್ಲಿ 26 ಜನರು ಸಾವನ್ನಪ್ಪಿದ್ದರು. ಈ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೂವರು ಶಂಕಿತ ಪಾಕ್ ಉಗ್ರರ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದ್ದಾರೆ. ಆ ಪೋಸ್ಟರ್‌ ಗಳನ್ನು ಅಂಟಿಸಿ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಜೊತೆಗೆ ಸುಳಿವು ಕೊಟ್ಟವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ಉಲ್ಲೇಖಿಸಿದ್ದಾರೆ. ಸದ್ಯ ಜಮ್ಮು ಮತ್ತು ಕಾಶ್ಮೀರದಾದ್ಯಂತ `ಭಯೋತ್ಪಾದನೆ ಮುಕ್ತ ಕಾಶ್ಮೀರ’ ಎಂಬ ಸಂದೇಶಗಳನ್ನು ಒಳಗೊಂಡಿರುವ ಪೋಸ್ಟರ್‌ ಗಳು ಕಾಣಿಸಿಕೊಂಡಿದ್ದು, ಅದರಲ್ಲಿ ಲಷ್ಕರ್-ಇ-ತೈಬಾದ (LET) ಮೂವರು ಭಯೋತ್ಪಾದಕರಾದ ಅನಂತ್‌ನಾಗ್ ನಿವಾಸಿ ಆದಿಲ್ ಹುಸೇನ್ ಥೋಕರ್ ಮತ್ತು ಪಾಕ್ ಪ್ರಜೆಗಳಾದ ಅಲಿ ಭಾಯ್ ಅಕಾ ತಲ್ಹಾ ಭಾಯ್ ಮತ್ತು ಹಶಿಮ್ ಮೂಸಾ ಅಕಾ ಸುಲೇಮಾನ್ ಫೋಟೋಗಳಿವೆ.

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು `ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಪಾಕ್‌ ನ 9 ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿತು.

ಉಡುಪಿ: ಕುಡಿದ ಮತ್ತಿನಲ್ಲಿ ತ‌ನ್ನದೇ ಮನೆಗೆ ಬೆಂಕಿ‌ ಹಚ್ಚಿದ ವ್ಯಕ್ತಿ..! ಅನಾಹುತ ತಪ್ಪಿಸಿದ ಅಗ್ನಿಶಾಮಕ ದಳ..!

ಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಬೆಂಗಳೂರಿನ ಯುವಕ ಅರೆಸ್ಟ್..! ಆತನ ವಿಡಿಯೋದಲ್ಲೇನಿತ್ತು..?

See also  ಓಲಾ ಸ್ಕೂಟರ್‌ ರಿಪೇರಿಗೆ 90,000 ರೂ. ಬಿಲ್ ನೋಡಿ ಶಾಕ್ ಆದ ಗ್ರಾಹಕ..! ಶೋ ರೂಮ್‌ ಮುಂದೆಯೇ ಓಲಾ ಸ್ಕೂಟರ್‌ ಅನ್ನು ಪುಡಿ ಮಾಡಿದ ವ್ಯಕ್ತಿ..! ಇಲ್ಲಿದೆ ವಿಡಿಯೋ
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget