ನ್ಯೂಸ್ ನಾಟೌಟ್: ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಪೋಸ್ಟರ್ ಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಿಡುಗಡೆ ಮಾಡಿದ್ದು, ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಏ.22 ರಂದು ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧದಲ್ಲಿ 26 ಜನರು ಸಾವನ್ನಪ್ಪಿದ್ದರು. ಈ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೂವರು ಶಂಕಿತ ಪಾಕ್ ಉಗ್ರರ ಪೋಸ್ಟರ್ಗಳನ್ನು ಬಿಡುಗಡೆಗೊಳಿಸಿದ್ದಾರೆ. ಆ ಪೋಸ್ಟರ್ ಗಳನ್ನು ಅಂಟಿಸಿ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಜೊತೆಗೆ ಸುಳಿವು ಕೊಟ್ಟವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ಉಲ್ಲೇಖಿಸಿದ್ದಾರೆ. ಸದ್ಯ ಜಮ್ಮು ಮತ್ತು ಕಾಶ್ಮೀರದಾದ್ಯಂತ `ಭಯೋತ್ಪಾದನೆ ಮುಕ್ತ ಕಾಶ್ಮೀರ’ ಎಂಬ ಸಂದೇಶಗಳನ್ನು ಒಳಗೊಂಡಿರುವ ಪೋಸ್ಟರ್ ಗಳು ಕಾಣಿಸಿಕೊಂಡಿದ್ದು, ಅದರಲ್ಲಿ ಲಷ್ಕರ್-ಇ-ತೈಬಾದ (LET) ಮೂವರು ಭಯೋತ್ಪಾದಕರಾದ ಅನಂತ್ನಾಗ್ ನಿವಾಸಿ ಆದಿಲ್ ಹುಸೇನ್ ಥೋಕರ್ ಮತ್ತು ಪಾಕ್ ಪ್ರಜೆಗಳಾದ ಅಲಿ ಭಾಯ್ ಅಕಾ ತಲ್ಹಾ ಭಾಯ್ ಮತ್ತು ಹಶಿಮ್ ಮೂಸಾ ಅಕಾ ಸುಲೇಮಾನ್ ಫೋಟೋಗಳಿವೆ.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು `ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಪಾಕ್ ನ 9 ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿತು.
ಉಡುಪಿ: ಕುಡಿದ ಮತ್ತಿನಲ್ಲಿ ತನ್ನದೇ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ..! ಅನಾಹುತ ತಪ್ಪಿಸಿದ ಅಗ್ನಿಶಾಮಕ ದಳ..!
ಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಬೆಂಗಳೂರಿನ ಯುವಕ ಅರೆಸ್ಟ್..! ಆತನ ವಿಡಿಯೋದಲ್ಲೇನಿತ್ತು..?