Latestದೇಶ-ವಿದೇಶಬೆಂಗಳೂರುರಾಜಕೀಯರಾಜ್ಯ

ಪಹಲ್ಗಾಮ್ ಉಗ್ರ ದಾಳಿಯಲ್ಲಿ ಸಿಲುಕಿದ್ದ 178 ಕನ್ನಡಿಗರು ಬೆಂಗಳೂರಿಗೆ ವಾಪಸ್..! ಸ್ಥಳೀಯ ಕಾಶ್ಮೀರಿಗರು ನಮಗೆ ಅತ್ಯುತ್ತಮ ಆತಿಥ್ಯ ನೀಡಿದರು ಎಂದ ಕನ್ನಡಿಗರು..!

501

ನ್ಯೂಸ್ ನಾಟೌಟ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​​ನಲ್ಲಿ ನಡೆದ ಭೀಕರ ಉಗ್ರ ದಾಳಿಯ ನಂತರ ಕಾಶ್ಮೀರದ ವಿವಿಧೆಡೆ ಸಿಲುಕಿದ್ದ ಸುಮಾರು 178 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆ ತರಲಾಯಿತು. ಇಂದು(ಎ.24) ಮಧ್ಯಾಹ್ನ 12.30 ರ ಸುಮಾರಿಗೆ ಕನ್ನಡಿಗರನ್ನು ಒಳಗೊಂಡ ವಿಮಾನ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಬಂದಿಳಿಯಿತು.

ದಾಳಿಯ ಮಾಹಿತಿ ದೊರೆಯುತ್ತಿದ್ದಂತೆಯೇ ಕರ್ನಾಟಕ ಸರ್ಕಾರ ಎರಡು ವಿಶೇಷ ತಂಡಗಳನ್ನು ಕಾಶ್ಮೀರಕ್ಕೆ ಕಳುಹಿಸಿಕೊಟ್ಟಿತ್ತು. ಕಾರ್ಮಿಕ ಸಂತೋಷ್ ಅನಿಲ್ ಲಾಡ್ ನೇತೃತ್ವದಲ್ಲಿ ಕನ್ನಡಿಗರನ್ನು ವಾಪಸ್ ಕರೆತರುವ ಕಾರ್ಯಾಚರಣೆ ನಡೆಸಲಾಗಿತ್ತು. ಸಂಸದ ತೇಜಸ್ವಿ ಸೂರ್ಯ ಸಹ ಕಾಶ್ಮೀರದಲ್ಲಿ ರಕ್ಷಣಾ ತಂಡಕ್ಕೆ ಸಾಥ್ ನೀಡಿದ್ದರು.

ಬೆಂಗಳೂರಿಗೆ ವಾಪಸಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕನ್ನಡಿಗರು, ಕಾಶ್ಮೀರಿಗರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಸ್ಥಳೀಯ ಕಾಶ್ಮೀರಿಗರು ನಮಗೆ ಅತ್ಯುತ್ತಮ ಆತಿಥ್ಯತ್ಯ ನೀಡಿದರು. ಅದೇ ರೀತಿ ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾರ ನಮ್ಮನ್ನು ಸುರಕ್ಷಿತವಾಗಿ ಕರೆತರಲು ಎಲ್ಲ ರೀತಿಯ ವ್ಯವಸ್ಥೆ ಮಾಡಿದವು. ಅವರಿಗೆ ಧನ್ಯವಾದಗಳು ಎಂದು ವಾಪಸಾದ ಕನ್ನಡಿಗರು ಹೇಳಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಚಿವ ಸಂತೋಷ್​ ಲಾಡ್​, ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಕನ್ನಡಿಗರು ಆಘಾತದಲ್ಲಿದ್ದರು. ಯಾವಾಗ ಏನು ಬೇಕಾದರೂ ಆಗಬಹುದೆಂಬ ಭಯ ಅವರಲ್ಲಿತ್ತು. ನಾನೇ 40ಕ್ಕೂ ಹೆಚ್ಚು ಸ್ಥಳಕ್ಕೆ ಭೇಟಿ ನೀಡಿ ಕನ್ನಡಿಗರ ಭೇಟಿಯಾದೆ. ಮಾಧ್ಯಮಗಳು ಪ್ರಸಾರ ಮಾಡಿದ ಸಹಾಯವಾಣಿ ಸಂಖ್ಯೆ ಹಾಗೂ ಮಾಹಿತಿ ಪಡೆದು ಅನೇಕರು ನಮ್ಮನ್ನು ಸಂಪರ್ಕಿಸಿದರು. ಎಲ್ಲರ ಸಹಕಾರದಿಂದ ಕನ್ನಡಿಗರನ್ನು ಕರೆತರುವುದು ಸಾಧ್ಯವಾಯಿತು ಎಂದರು.

ನಿರೀಕ್ಷೆಯೇ ಮಾಡಿರದ ಸಾವು ಆ ಉಗ್ರರಿಗೆ ಬರಲಿದೆ ಎಂದ ಮೋದಿ..! ಚಿಕಿತ್ಸೆ ಪಡೆಯುತ್ತಿರುವವರು ಶ್ರೀಘ್ರ ಗುಣಮುಖರಾಗುವಂತೆ ಸರ್ಕಾರ ನೋಡಿಕೊಳ್ಳುತ್ತಿದೆ ಎಂದ ಪ್ರಧಾನಿ

See also  "ನಾನು ಹುಟ್ಟಿರೋದು ನನ್ನ ಅಪ್ಪ-ಅಮ್ಮನಿಗೆ, ಸನಾತನ ಧರ್ಮಕ್ಕೆ ಅಲ್ಲ" ನಟ ಪ್ರಕಾಶ್ ರಾಜ್..! ಉದಯನಿಧಿ ಸ್ಟಾಲಿನ್ ಸಮರ್ಥಿಸಿಕೊಂಡ ಪ್ರಕಾಶ್ ರಾಜ್, ಜಾಲತಾಣದಲ್ಲಿ ಪ್ರಕಾಶ್ ರಾಜ್ ಗೆ ಮತ್ತೆ ಟೀಕೆಗಳ ಸುರಿಮಳೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget