Latestಕ್ರೈಂದೇಶ-ವಿದೇಶ

ಪಾಕ್ ಶೆಲ್ ದಾಳಿಯಲ್ಲಿ ಹಾನಿಗೀಡಾದ ಮನೆಗಳಿಗೆ ₹3.3 ಲಕ್ಷ ರೂ. ಪರಿಹಾರ ಘೋಷಿಸಿದ ಕೇಂದ್ರ..! ಇಲ್ಲಿದೆ ಸಂಪೂರ್ಣ ಮಾಹಿತಿ

259

ನ್ಯೂಸ್ ನಾಟೌಟ್: ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ಕ್ಕೆ ಪ್ರತಿಯಾಗಿ ಪಾಕಿಸ್ತಾನ ನಡೆಸಿದ ಶೆಲ್‌ ದಾಳಿಯ ಪ್ರಯತ್ನದಲ್ಲಿ ಹಾನಿಗೀಡಾದ ಮನೆಗಳಿಗೆ ಹೆಚ್ಚುವರಿಯಾಗಿ ₹2 ಲಕ್ಷ ನೀಡಲು ಕೇಂದ್ರ ಸರ್ಕಾರ ಶುಕ್ರವಾರ(ಜೂ.6) ನಿರ್ಧರಿಸಿದೆ.

ಜಮ್ಮು ಮತ್ತು ಕಾಶ್ಮಿರದ ಅನಂತನಾಗ್‌ ಜಿಲ್ಲೆಯ ಪ್ರವಾಸಿ ತಾಣ ಪಹಲ್ಗಾಮ್‌ ನಲ್ಲಿ ಉಗ್ರರು ಏಪ್ರಿಲ್‌ 22ರಂದು ಗುಂಡಿನ ದಾಳಿ ನಡೆಸಿದ್ದರು. 26 ಜನರು ಹತ್ಯೆಯಾಗಿ, ಹಲವರು ಗಾಯಗೊಂಡಿದ್ದರು. ಮೇ 7ರಂದು ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆ ನಡೆಸಿದ್ದ ಭಾರತೀಯ ಸೇನೆ, ಉಗ್ರರ ಕೆಲವು ನೆಲೆಗಳು ಹಾಗೂ ನೂರಾರು ಭಯೋತ್ಪಾದಕರನ್ನ ಹತ್ಯೆಗೈದಿತ್ತು.

ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಸೇನೆಯು ಭಾರತವನ್ನು ಗುರಿಯಾಗಿಸಿ ಶೆಲ್ ದಾಳಿ ನಡೆಸಿತ್ತು. ಬಾರಾಮುಲ್ಲಾ, ಪೂಂಚ್ ಮತ್ತು ಕುಪ್ವಾರಾ ಜಿಲ್ಲೆಯಲ್ಲಿ ನೆಲೆಸಿರುವ ಗಡಿ ಭಾಗದಲ್ಲಿರುವ ಹಲವು ಭಾರತೀಯರ ಮನೆಗಳಿಗೆ ಹಾನಿಯುಂಟು ಮಾಡಿತ್ತು. ಇದಕ್ಕೆ ಈ ಮೊದಲು ಪ್ರತಿ ಮನೆಗೆ ₹1.3 ಲಕ್ಷದಂತೆ ಕೇಂದ್ರ ಸರ್ಕಾರ ಪರಿಹಾರ ಘೋಷಿಸಿತ್ತು. ಇದು ಗರಿಷ್ಠ ನಷ್ಟ ಅನುಭವಿಸಿದ ಮನೆಗಳಿಗೆ ಮಾತ್ರ. ಆದರೆ ಆಗಿರುವ ಹಾನಿಗೆ ಈ ಪರಿಹಾರ ಎಳ್ಳಷ್ಟೂ ಸಾಕಾಗದು ಎಂಬ ದೂರು ಕೇಳಿಬಂದಿತ್ತು.

ಇದೀಗ ಹೆಚ್ಚುವರಿಯಾಗಿ ಅತಿ ಹೆಚ್ಚು ಹಾನಿಗೀಡಾದ ಮನೆಗಳಿಗೆ ₹2 ಲಕ್ಷ ಹೆಚ್ಚುವರಿ ಪರಿಹಾರ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಹೆಚ್ಚುವರಿಯಾಗಿ ತಲಾ ₹1 ಲಕ್ಷ ಪರಿಹಾರ ನೀಡಲಾಗುವುದು ಎಂದಿದೆ.  

ಬ್ಯಾಗ್ ಕಳ್ಳನಿಂದ ಪತ್ನಿಯನ್ನು ರಕ್ಷಿಸಲು ಹೋಗಿ ಕೈ ಕಳೆದುಕೊಂಡ ವೈದ್ಯ..! ಸಿನಿಮೀಯ ಘಟನೆಯಲ್ಲಿ ದಂಪತಿ ಪಾರಾಗಿದ್ದೇ ರೋಚಕ..!

ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ..! 10 ಮತ್ತು 6 ವರ್ಷದ ಮಕ್ಕಳನ್ನು ಕಳೆದುಕೊಂಡು ತಂದೆಯ ರೋಧನೆ..!

See also  ಪೆರಿಯಶಾಂತಿ: ಸ್ಕೋಟಿ ಸಹಿತ ಕೊಚ್ಚಿ ಹೋದ ಚಾಲಕನ ರಕ್ಷಣೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget