Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಪಾಕಿಸ್ತಾನದ ಹಿರಿಯ ರಾಜಕಾರಣಿಗಳೊಂದಿಗೆ ವೇದಿಕೆ ಹಂಚಿಕೊಂಡ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್..! ಹತ್ಯೆಗೀಡಾದ ಪಾಕಿಸ್ತಾನಿ ಉಗ್ರರರನ್ನು ʻಹುತಾತ್ಮರುʼ ಎಂದ ಉಗ್ರ..!

2.8k

ನ್ಯೂಸ್ ನಾಟೌಟ್: ಪಹಲ್ಗಾಮ್‌ ನ ಬೈಸರನ್ ಕಣಿವೆಯಲ್ಲಿ ಹಿಂದೂಗಳ ನರಮೇಧ ಮಾಡಿದ ಕೃತ್ಯದ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್ ಪಾಕಿಸ್ತಾನದ ರ‍್ಯಾಲಿಯೊಂದರಲ್ಲಿ ಹಿರಿಯ ರಾಜಕಾರಣಿಗಳೊಂದಿಗೆ ವೇದಿಕೆ ಹಂಚಿಕೊಂಡಿದ್ದಾನೆ. ಜೊತೆಗೆ ವೇದಿಕೆ ಭಾಷಣದಲ್ಲಿ ಭಾರತದ ವಿರುದ್ಧ ಮತ್ತೆ ವಿಷಕಾರಿರುವುದು ಕಂಡುಬಂದಿದೆ.

ಲಷ್ಕರ್-ಎ-ತೈಬಾ (LeT) ಉಪ ಮುಖ್ಯಸ್ಥನಾಗಿರುವ ಸೈಫುಲ್ಲಾ ಖಾಲಿದ್ ಮುಂಬೈ ದಾಳಿ ಸೂತ್ರಧಾರ ಹಫೀಜ್ ಸಯೀದ್‌ ನ ಆಪ್ತನೂ ಕೂಡ ಆಗಿದ್ದಾನೆ. ಪಾಕಿಸ್ತಾನದ ಪಂಜಾಬ್‌ ನಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯಲ್ಲಿ ರಾಜಕಾರಣಿ ಮಲಿಕ್ ಅಹ್ಮದ್ ಖಾನ್ ಜೊತೆಗೆ ವೇದಿಕೆ ಹಂಚಿಕೊಂಡಿರುವುದು ಕಂಡುಬಂದಿದೆ. ಅಲ್ಲದೇ ಪಾಕ್‌ ಸೇನೆಯಿಂದಲೇ ಅವನಿಗೆ ರಕ್ಷಣೆ ನೀಡಲಾಗಿದೆ. ಇದೇ ವೇದಿಕೆಯಲ್ಲಿ ಎಲ್‌ಇಟಿ‌ ಸ್ಥಾಪಕ ಮತ್ತು ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಪುತ್ರ ತಲ್ಹಾ ಸಯೀದ್ ಕೂಡ ಇದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ.

ಬಳಿಕ ವೇದಿಕೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿರುವ ಸೈಫುಲ್ಲಾ ಖಾಲಿದ್‌, ಭಾರತ, ಹಿಂದೂಗಳ ವಿರುದ್ಧ ದ್ವೇಷ ಭಾಷಣ ಮಾಡಿದ್ದಾನೆ. ಜೊತೆಗೆ ಆಪರೇಷನ್‌ ಸಿಂಧೂರದಲ್ಲಿ ಹತ್ಯೆಗೀಡಾದ ಪಾಕಿಸ್ತಾನಿ ಉಗ್ರರರನ್ನ ʻಹುತಾತ್ಮರುʼ ಎಂದು ಕರೆದಿದ್ದಾನೆ.

ಏಪ್ರಿಲ್‌ 22ರಂದು ಭಯೋತ್ಪಾದಕ ದಾಳಿ ನಡೆದಿರುವ ಬಗ್ಗೆ ನಾನು ಮಾಹಿತಿ ಪಡೆದುಕೊಂಡೆ. ಅದಾದ ಮೇಲೆ ಭಾರತ ನನ್ನನ್ನು ಮಾಸ್ಟರ್‌ ಮೈಂಡ್‌ ಅಂತ ಘೋಷಿಸಿರುವುದು ನನಗೆ ಗೊತ್ತಾಯ್ತು. ನಾವು ಗುಂಡಿನ ದಾಳಿಗೆ ಹೆದರೋದಿಲ್ಲ. ಹುತಾತ್ಮರಾಗಿಯೇ ಸಾಯಲು ಬಯಸುತ್ತೇವೆ ಎಂದು ಖಾಲಿದ್‌ ಹೇಳಿದ್ದಾನೆ.

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡುತ್ತಿರುವ ಮುಸ್ಲಿಂ ಮುಖಂಡರು..! ದಿನೇಶ್ ಗುಂಡೂರಾವ್ ನೀಡಿದ ಹೇಳಿಕೆ ಹಿಂಪಡೆಯುವಂತೆ ಒತ್ತಾಯ..!

See also  4,500 ಎಕರೆ ಜಾಗಕ್ಕೆ ಸರ್ಕಾರ ಮತ್ತು ರಾಜ ಮನೆತನದ ನಡುವೆ ಜಟಾಪಟಿ..? ಅರಮನೆ ಹೆಸರಿಗೆ ಜಮೀನು ಬಂದ್ರೂ ಗ್ರಾಮಸ್ಥರು ಆತಂಕ ಪಡಬೇಕಿಲ್ಲ ಎಂದ ರಾಜಮಾತೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget