ನ್ಯೂಸ್ ನಾಟೌಟ್: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ವಾರಣಾಸಿಯ ವ್ಯಕ್ತಿಯೋರ್ವನನ್ನು ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ (ATS) ಗುರುವಾರ(ಮೇ.23) ಬಂಧಿಸಿದೆ.
ಬಂಧಿತ ವ್ಯಕ್ತಿಯನ್ನು ವಾರಾಣಸಿ ನಿವಾಸಿಯಾಗಿರುವ ಟಫೈಲ್ ಎನ್ನಲಾಗಿದ್ದು, ಭಾರತದ ಆಂತರಿಕ ಭದ್ರತೆಯ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಿ ಸಂಪರ್ಕಗಳೊಂದಿಗೆ ಹಂಚಿಕೊಂಡ ಆರೋಪ ಈತನ ಮೇಲಿದೆ.
ಪಾಕಿಸ್ತಾನದ ನಿಷೇಧಿತ ಭಯೋತ್ಪಾದಕ ಗುಂಪು ತೆಹ್ರೀಕ್-ಎ-ಲಬ್ಬೈಕ್ನ ನಾಯಕ ಮೌಲಾನಾ ಶಾ ರಿಜ್ವಿ ಅವರ ವೀಡಿಯೊಗಳನ್ನು ಟಫೈಲ್ ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ, ಜೊತೆಗೆ ‘ಘಜ್ವಾ-ಎ-ಹಿಂದ್’, ಬಾಬರಿ ಮಸೀದಿ ಧ್ವಂಸಕ್ಕೆ ಪ್ರತೀಕಾರ ಮತ್ತು ಭಾರತದಲ್ಲಿ ಶರಿಯಾ ಕಾನೂನು ಜಾರಿಗೆ ಕರೆ ನೀಡುವ ಸಂದೇಶಗಳನ್ನು ಈತ ಹಂಚಿಕೊಂಡಿದ್ದಾನೆ ಎಂದು ಯುಪಿ ಎಟಿಎಸ್ ಹೇಳಿಕೆಯಲ್ಲಿ ತಿಳಿಸಿದೆ. ಕೆಲ ಪಾಕ್ ಎಜೆಂಟ್ ಗಳ ಜೊತೆ ನಂಟಿದ್ದದ್ದು ಬಯಲಾಗಿದೆ.
ಕಳೆದ ಕೆಲ ದಿನಗಳಿಂದ ಪಾಕ್ ಪರ ಬೇಹುಗಾರಿಕೆ ನಡೆಸಿರುವ ಆರೋಪದ ಮೇಲೆ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ.