Latestಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಪಾಕ್‌ ವಿರುದ್ಧ ಮುಂದಿನ 36 ಗಂಟೆಗಳಲ್ಲಿ ಮಿಲಿಟರಿ ದಾಳಿಗೆ ಭಾರತ ಮುಂದಾಗಲಿದೆ ಎಂದ ಪಾಕ್‌ ಸಚಿವ..! ಮಧ್ಯರಾತ್ರಿ ಪಾಕ್ ನಿಂದ ಸುದ್ದಿಗೋಷ್ಠಿ..!

372

ನ್ಯೂಸ್ ನಾಟೌಟ್ : ಪಾಕಿಸ್ತಾನ ವಿರುದ್ಧ ಮಿಲಿಟರಿ ಕ್ರಮಕ್ಕೆ ಭಾರತ ಮುಂದಾಗುತ್ತಿದೆ. ಮುಂದಿನ 24-36 ಗಂಟೆಗಳಲ್ಲಿ ಭಾರತ ಮಿಲಿಟರಿ ಕಾರ್ಯಾಚರಣೆ ನಡೆಸಲು ಯೋಜಿಸುತ್ತಿದೆ ಎಂದು ಪಾಕ್‌ ಸಚಿವ ಅತಾವುಲ್ಲಾ ತರಾರ್‌ ಹೇಳಿಕೆ ನೀಡಿದ್ದಾರೆ. ಅಲ್ಲದೇ, ಸೇನಾ ಕ್ರಮ ಕೈಗೊಂಡರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ಮೋದಿ ಸರಣಿ ಸಭೆ ನಡೆಸಿದ್ದು, ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಮೋದಿಯ ಬ್ಯಾಕ್‌ ಟು ಬ್ಯಾಕ್‌ ಸಭೆಗೆ ಪಾಕಿಸ್ತಾನ ಅಕ್ಷರಶಃ ಬೆಚ್ಚಿಬಿದ್ದಿದೆ. ಇದರ ಬೆನ್ನಲ್ಲೇ ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿ ಪಾಕಿಸ್ತಾನದ ಅಧಿಕಾರಿಗಳು ಮಾತನಾಡಿದ್ದಾರೆ.

“26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿದೆ ಎಂಬ ಭಾರತದ ಆರೋಪ ಆಧಾರರಹಿತವಾದದ್ದು. ಕಪೋಲಕಲ್ಪಿತ ಆರೋಪಗಳ ಆಧಾರದ ಮೇಲೆ ಭಾರತೀಯ ಪಡೆಗಳು ದಾಳಿ ನಡೆಸಲು ಸಿದ್ಧತೆ ನಡೆಸುತ್ತಿವೆ” ಎಂದು ಪಾಕ್ ಸಚಿವ ಅತಾವುಲ್ಲಾ ತರಾರ್ ಹೇಳಿದ್ದಾರೆ.

“ಭಾರತ ಸ್ವತಃ ತಾನೇ ತೀರ್ಪುಗಾರನಂತೆ ವರ್ತಿಸುತ್ತಿದೆ. ಜವಾಬ್ದಾರಿಯುತ ರಾಷ್ಟ್ರವಾಗಿ ಸತ್ಯವನ್ನು ಖಚಿತಪಡಿಸಿಕೊಳ್ಳಲು ತಜ್ಞರ ಆಯೋಗಕ್ಕೆ ವಿಶ್ವಾಸಾರ್ಹ, ಪಾರದರ್ಶಕ ಹಾಗೂ ಸ್ವತಂತ್ರ ತನಿಖೆ ನಡೆಸಲು ಪಾಕಿಸ್ತಾನ ಮುಕ್ತ ಅವಕಾಶ ನೀಡಿದೆ. ಪಾಕಿಸ್ತಾನವು ಭಯೋತ್ಪಾದನೆಯ ಬಲಿಪಶುವಾಗಿದೆ” ಎಂದು ತರಾರ್‌ ಮಾತನಾಡಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ತೆಗೆದುಕೊಂಡ ಹಲವಾರು ಕ್ರಮಗಳ ನಂತರ ಗಡಿಯುದ್ದಕ್ಕೂ ಉದ್ವಿಗ್ನತೆ ಹೆಚ್ಚಾಯಿತು. ಈ ನಡುವೆ ಭಾರತವು 1960 ರ ಸಿಂಧೂ ಜಲ ಒಪ್ಪಂದವನ್ನು ಅಮಾನತ್ತುಗೊಳಿಸಿದೆ. ಏಪ್ರಿಲ್ 27 ರಿಂದ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ ವೀಸಾಗಳನ್ನು ರದ್ದುಗೊಳಿಸಿದೆ. ಅಟ್ಟಾರಿ ಭೂ-ಸಾರಿಗೆ ಪೋಸ್ಟ್ ಅನ್ನು ತಕ್ಷಣವೇ ಮುಚ್ಚಲು ಆದೇಶಿಸಿ ಕ್ರಮ ಕೈಗೊಂಡಿತ್ತು.

ಪಾಕಿಸ್ತಾನ​ ಪ್ರಧಾನಿ ಆಸ್ಪತ್ರೆಗೆ ದಾಖಲು..! ಯುದ್ಧ ಭೀತಿಯ ನಡುವೆ ಶೆಹಬಾಜ್ ಷರೀಫ್ ​ಗೆ ಅನಾರೋಗ್ಯ..!

ಕೋಲ್ಕತ ಹೋಟೆಲ್ ​ನಲ್ಲಿ ಬೆಂಕಿ ಅವಘಡಕ್ಕೆ 14 ಮಂದಿ ಸಜೀವ ದಹನ..! ಇಲ್ಲಿದೆ ವಿಡಿಯೋ

See also  ಕೇವಲ1000ಕ್ಕೆ ಬೆಟ್ಟ್ ಕಟ್ಟಿ ಮೊಮೊಸ್ ತಿಂದ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದ..! ಅಷ್ಟಕ್ಕೂ 23ರ ಯುವಕನಿಗೆ ಆಗಿದ್ದೇನು?
  Ad Widget   Ad Widget   Ad Widget   Ad Widget