Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಸರಬರಾಜು ಮಾಡಿಲ್ಲ ಎಂದ ಟರ್ಕಿ..! ಟರ್ಕಿಗೆ ಭೂಕಂಪ ಸಂದರ್ಭದಲ್ಲಿ ಭಾರೀ ಪ್ರಮಾಣದ ಸಹಾಯ ಮಾಡಿದ್ದ ಭಾರತ..!

1k

ನ್ಯೂಸ್ ನಾಟೌಟ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಯುದ್ಧದ ಭೀತಿಯೂ ಇದೆ. ಈ ನಡುವೆ ಟರ್ಕಿ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳ ಸರಬರಾಜು ಮಾಡಿಲ್ಲ ಎಂದು ಹೇಳಿಕೆ ನೀಡಿದೆ. ಇದು ಪಾಕಿಸ್ತಾನಕ್ಕೆ ಬಹುದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಸಲಾಗಿದೆ.

ಭಾರತದೊಂದಿಗಿನ ಯುದ್ಧದ ಭೀತಿ ನಡುವೆಯೇ ಟರ್ಕಿ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಕಳುಹಿಸಿದೆ ಎನ್ನುವ ವರದಿಯನ್ನು ಟರ್ಕಿ ಅಲ್ಲಗಳೆದಿದೆ.

ಟರ್ಕಿಯಲ್ಲಿ ಭೂಕಂಪ ಸಂಭವಿಸಿದ ಸಂದರ್ಭದಲ್ಲಿ ಭಾರತವು ಸಾಕಷ್ಟು ಸಹಾಯ ಮಾಡಿತ್ತು. ಆದರೆ ಭಾರತದ ರಕ್ತ ಹರಿಸಲು ಟರ್ಕಿಯು ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಕಳುಹಿಸಿದೆ ಎನ್ನವ ವಿಚಾರ ಎಲ್ಲೆಡೆ ಹರಿದಾಡಿತ್ತು. ಆದರೆ ಟರ್ಕಿ ಇದಕ್ಕೆ ಸ್ಪಷ್ಟನೆ ನೀಡಿದ್ದು, ನಾವು ಯಾವುದೇ ಶಸ್ತ್ರಾಸ್ತ್ರಗಳನ್ನು ಕಳುಹಿಸಿಲ್ಲ ಎಂದು ಹೇಳಿದೆ. ಶಸ್ತ್ರಾಸ್ತ್ರಗಳನ್ನು ಹೊತ್ತ ಟರ್ಕಿಶ್ ವಾಯುಪಡೆಯ ಸಿ -130 ಹರ್ಕ್ಯುಲಸ್ ಮಿಲಿಟರಿ ಸಾರಿಗೆ ವಿಮಾನ ಭಾನುವಾರ(ಎ.27) ಕರಾಚಿಗೆ ಬಂದಿಳಿದಿತ್ತು ಎನ್ನಲಾಗಿತ್ತು. ಆದರೆ ಟರ್ಕಿಯಿಂದ ಹೊರಟ ಸರಕು ವಿಮಾನ ಇಂಧನ ತುಂಬಲು ಪಾಕಿಸ್ತಾನದಲ್ಲಿ ಇಳಿದಿತ್ತು, ಯಾವುದೇ ಊಹಾಪೋಹಗಳಿಗೂ ಕಿವಿಗೊಡಬೇಡಿ ಎಂದು ಹೇಳಿದೆ.

ಮುಸ್ಲಿಂ ಬಹುಸಂಖ್ಯಾತರಾಗಿರುವ ಈ ಪ್ರದೇಶವು ಭಾರತ ಮತ್ತು ಪಾಕಿಸ್ತಾನದ ನಡುವಿನ ದೀರ್ಘಕಾಲದ ವಿವಾದದ ಕೇಂದ್ರವಾಗಿದೆ. ನಡೆಯುತ್ತಿರುವ ಪ್ರಾದೇಶಿಕ ವಿವಾದವು ಈ ಪರಮಾಣು-ಸಶಸ್ತ್ರ ನೆರೆಹೊರೆಯವರ ನಡುವಿನ ಸಂಬಂಧವನ್ನು ಬಿಗಡಾಯಿಸಿದೆ. ಈ ಹಿಂದೆ ಟರ್ಕಿ ಪಾಕಿಸ್ತಾನದ ಜೊತೆ ಶಸಸ್ತ್ರ ಒಪ್ಪಂದ ಮಾಡಿಕೊಂಡಿತ್ತು.

 

See also  ಮಂಗಳೂರು: ಚೂರಿಯಿಂದ ಇರಿದು ವ್ಯಕ್ತಿಯ ಹತ್ಯೆ..! ಮದುವೆ ವಿಚಾರಕ್ಕೆ ಗಲಾಟೆ..!
  Ad Widget   Ad Widget     Ad Widget   Ad Widget   Ad Widget   Ad Widget