Latestರಾಜಕೀಯ

‘ಗ್ಯಾರಂಟಿ ಯೋಜನೆಗಳು ಆರ್ಥಿಕ ಹೊರೆ’ ಪರಮೇಶ್ವರ್ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ, ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸಿದ್ದು ಪರಮೇಶ್ವರ್ ಎಂದ ಡಿಕೆಶಿ!

684

ನ್ಯೂಸ್‌ ನಾಟೌಟ್: ಸದ್ಯ  ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಹೊರೆಯಾಗಿವೆ ಎಂಬ ಮಾತುಗಳು ಇದೀಗ ಕಾಂಗ್ರೆಸ್ ಸರ್ಕಾರದ ಸಚಿವರಿಂದಲೇ ಬರುತ್ತಿವೆ.ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆ ಎಂದಿರುವ ಗೃಹ ಸಚಿವ ಪರಮೇಶ್ವರ್ ಅವರೇ ಕಾಂಗ್ರೆಸ್ ಪ್ರಣಾಳಿಕೆ ಸಿದ್ದಪಡಿಸಿದ್ದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಕುರಿತು ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು “2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು ಪರಮೇಶ್ವರ ನೇತೃತ್ವದ ಸಮಿತಿ ಎಂದು ಮಂಗಳವಾರ ಹೇಳಿದ್ದಾರೆ.ಪರಮೇಶ್ವರ್ ಅವರು ಗ್ಯಾರಂಟಿ ಯೋಜನೆಗಳ ವಿವರಗಳನ್ನು ತಿಳಿದಿರಬೇಕಿತ್ತು. ಗ್ಯಾರಂಟಿ ಯೋಜನೆಗಳು ಆರ್ಥಿಕ ಹೊರೆ ಎಂದು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ,’’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ‘

ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆಯಾಗಿವೆ ಎಂಬ ಗೃಹ ಸಚಿವರ ಹೇಳಿಕೆಗೆ ಉಪಮುಖ್ಯಮಂತ್ರಿ ಪ್ರತಿಕ್ರಿಯಿಸಿದರು.ಗ್ಯಾರಂಟಿ ಯೋಜನೆಗಳಿಂದ ಹೊರೆ ಆಗುತ್ತಿರುವುದು ನಿಜ. ಅದು ಗೊತ್ತಿದ್ದೇ ನಾವು ಜಾರಿಗೆ ತಂದಿದ್ದೇವೆ. ಬಡವರಿಗಾಗಿ ಆಗುವ ಈ ಹೊರೆಯನ್ನು ನಾವು ಸಹಿಸಿಕೊಳ್ಳಬೇಕು ಎಂದು ಪರಮೇಶ್ವರ್ ಹೇಳಿದ್ದರು.

See also  ರಜತ್‍ ಮೇಲೆ ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪ..! ಕಿರುತೆರೆ ನಟನಿಗೆ 14 ದಿನ ಜೈಲು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget