ಕ್ರೈಂಬೆಂಗಳೂರುವೈರಲ್ ನ್ಯೂಸ್

ಪಟ್ಟಣಗೆರೆ ಶೆಡ್ ಮಾಲೀಕರಿಗೆ ನೋಟಿಸ್ ನೀಡಿದ ಬಿಬಿಎಂಪಿ..! ದರ್ಶನ್ ಕೇಸ್ ಬಳಿಕ ಶೆಡ್ ಮಾಲೀಕನಿಗೆ ಮತ್ತೊಂದು ಶಾಕ್..!

ನ್ಯೂಸ್ ನಾಟೌಟ್ : ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣದ ಬಳಿಕ ಪಟ್ಟಣಗೆರೆ ಶೆಡ್ ಭಾರಿ ಸುದ್ದಿಯಾಗಿದೆ. ಈ ಬೆನ್ನಲ್ಲೇ ಪಟ್ಟಣಗೆರೆ ಶೆಡ್‍ ಮಾಲಿಕನಿಗೆ ಬಿಬಿಎಂಪಿ ಶಾಕ್ ನೀಡಿದೆ.

ರೇಣುಕಾಸ್ವಾಮಿಯನ್ನ ಹತ್ಯೆ ಮಾಡಿದ ಸ್ಥಳವಾದ ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನೋಟಿಸ್ ನೀಡಿದೆ. 2008 – 09 ರಿಂದ ಆಸ್ತಿ ತೆರಿಗೆ ಪಾವತಿ ಆಗಿಲ್ಲ ಎಂದು ಕೆಂಗೇರಿ ಉಪ ವಲಯದಲ್ಲಿ ಸಹಾಯಕ ಕಂದಾಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನೋಟೀಸ್ ನಲ್ಲಿ 15 ದಿನಗಳ ಒಳಗೆ ಆಸ್ತಿ ತಮ್ಮದೇ ಅಂತಾ ಘೋಷಿಸಿಕೊಂಡು ತೆರಿಗೆ ಪಾವತಿಸುವಂತೆ ಸೂಚನೆ ಕೊಟ್ಟಿದ್ದಾರೆ.

ಒಂದು ವೇಳೆ 15 ದಿನಗಳ ಒಳಗೆ ತೆರಿಗೆ ಪಾವತಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ದರ್ಶನ್ ಕೇಸ್ ನಲ್ಲಿ ಶೆಡ್ ಸುದ್ದಿಯಾದ ಬಳಿಕ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ಇನ್ನೂ ಅದೆಷ್ಟೋ ಆಸ್ತಿಗಳ ತೆರಿಗೆ ಈ ರೀತಿಯೇ ಬಾಕಿ ಇರಬಹುದು ಎಂದು ಶಂಕಿಸಲಾಗಿದೆ.

Click 👇

https://newsnotout.com/2024/06/darshan-and-vijayalakshmi-court-issue-stay-order-against-media
https://newsnotout.com/2024/06/real-hero-mahesh-babu-helps-poor-family-and-taken-for-granted
https://newsnotout.com/2024/06/polcie-subinspector-case-and-suspended-from-service-and-arrested
https://newsnotout.com/2024/06/ramayana-stage-play-fine-due-to-misleading-content-and-parts
https://newsnotout.com/2024/06/alchohol-kannada-news-tamil-nadu-case-25-people-nomore

Related posts

ಮಡಿಕೇರಿ: ದೇವರಕೊಲ್ಲಿ ಬಳಿ ಭೀಕರ ಅಪಘಾತ..! ಇಬ್ಬರಿಗೆ ಗಂಭೀರ ಗಾಯ

ನಾಯಿಯನ್ನು ಭೀಕರವಾಗಿ ಕೊಂದು ಆಟೋಗೆ ಕಟ್ಟಿ ಎಳೆದೊಯ್ದ ವ್ಯಕ್ತಿ..! ಆರೋಪಿ ಅರೆಸ್ಟ್..!

ಮಾಜಿ ಸಿಎಂ ಯಡಿಯೂರಪ್ಪಗೆ ಝಡ್ ಶ್ರೇಣಿ ಭದ್ರತೆ..! ಕೇಂದ್ರದ ಈ ದಿಢೀರ್ ಕಾರಣವೇನು..?