ಕರಾವಳಿಕ್ರೈಂಮಂಗಳೂರು

ಪೇರಡ್ಕ: 10ನೇ ತರಗತಿ ವಿದ್ಯಾರ್ಥಿ ಅಪಘಾತಕ್ಕೆ ಬಲಿ, 16 ವರ್ಷದ ಹುಡುಗ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವು

ನ್ಯೂಸ್ ನಾಟೌಟ್: ವಿದ್ಯಾರ್ಥಿ ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ವೊಂದು ಮಾರ್ಗ ಮಧ್ಯೆ ಮೋರಿಗೆ ಡಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಈ ದುರ್ಘಟನೆ ಕಡಬ ತಾಲೂಕಿನ ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ. ಮೃತವಿದ್ಯಾರ್ಥಿಯನ್ನು ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಎಂದು ಗುರುತಿಸಲಾಗಿದೆ. ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಬಾಲಕನನ್ನು ಕಡಬದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈ ವೇಳೆ ಗಂಭೀರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ.

Related posts

ಅಪ್ರಾಪ್ತ ಪುತ್ರನಿಗೆ ಬೈಕ್ ನೀಡಿದ ತಂದೆಗೆ ₹25 ಸಾವಿರ ದಂಡ..! ಒಂದು ದಿನದ ಕಠಿಣ ಸಜೆ

ಕುತ್ತಾರು ಕೊರಗಜ್ಜನ ಕೋಲದಲ್ಲಿ ಕತ್ರಿನಾ ಕೈಫ್‌, ಕೆ.ಎಲ್‌ ರಾಹುಲ್‌ ಭಾಗಿ, ಹರಕೆ ತೀರಿಸಿದ 9 ಮಂದಿ ಸೆಲೆಬ್ರಿಟಿಗಳು..!

ಕಾಸರಗೋಡಿನಿಂದ ಮಂಗಳೂರಿಗೆ ಬರುತ್ತಿದ್ದ ಆ್ಯಂಬುಲೆನ್ಸ್ ಮತ್ತು ಕಾರು ಮಧ್ಯೆ ಭೀಕರ ಅಪಘಾತ..! 3 ರ ದುರಂತ ಅಂತ್ಯ..!