ಕ್ರೈಂ

ಕೊಟ್ಟ ಹಣ ವಾಪಸ್ ಮಾಡದ್ದಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ

ನ್ಯೂಸ್ ನಾಟೌಟ್: ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಕುಶಾಲನಗರದ ರಾಧಾಕೃಷ್ಣ ಬಡಾವಣೆಯಲ್ಲಿ ನಡೆದಿದೆ.

ಸಮಿಯುಲ್ಲಾ ಖಾನ್(೪೦) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತನ್ನ ಹೆಂಡತಿ ಸುಹಾನಾರವರು ಕರ್ತವ್ಯ ಮುಗಿಸಿ ಮನೆಗೆ ಬಂದ ಸಮಯದಲ್ಲಿ ಘಟನೆ ಬೆಳಕಿಗೆ ಬಂದಿದೆ. ಕುಶಾಲನಗರದ ಅನುರಾಧಾ ಮೊಬೈಲ್ ಮಳಿಗೆ ಮಾಲೀಕರಾಗಿದ್ದರು. ತನ್ನ ಸಾವಿಗೆ ಕಾರಣ ಯಾರು ಎಂದು ಮರಣ ಪ್ರಮಾಣ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮರಣ ಪ್ರಮಾಣ ಪತ್ರದಲ್ಲಿ ವ್ಯಕ್ತಿಯೋರ್ವ ತನಗೆ ಹಣ ನೀಡದೇ ಇರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾರೆ. ಸಮಿಯುಲ್ಲಾ ತನ್ನ ಹೆಂಡತಿ ಹಾಗೂ ಓರ್ವ ಮಗನನ್ನು ಅಗಲಿದ್ದಾರೆ. ಕುಶಾಲನಗರ ಪೊಲೀಸ್ ಠಾಣಾಧಿಕಾರಿ ಅಪ್ಪಾಜಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

Related posts

ಉಪ್ಪಿನಂಗಡಿ: ನಡು ರಸ್ತೆಯಲ್ಲೇ ಎರಡು ಕಾರು ಪಾರ್ಕ್ ಮಾಡಿ ಸಂತೆಗೆ ಹೋದ ಅಣ್ತಮ್ಮ..!, ಅರ್ಧಗಂಟೆ ಕಾದು..ಕಾದು ಎರಡು KSRTC ಸಿಟಿ ಬಸ್ ನಲ್ಲಿದ್ದ ಜನ ಸುಸ್ತೋ…ಸುಸ್ತು..!

ರೈಲಿನಿಂದ ಇಳಿಯುವಾಗ ತಾಯಿಯ ಕೈತಪ್ಪಿ ಮೋರಿಗೆ ಬಿದ್ದ 4 ತಿಂಗಳ ಮಗು!ತಾಯಿಯ ಕಣ್ಣೆದುರೇ ಕೊಚ್ಚಿ ಹೋದ ಹಸುಗೂಸು! ಮುಂದೇನಾಯ್ತು..?

ಪರೀಕ್ಷೆ ಬರೆಯಲು ಬಂದವನನ್ನು ಕಾಲೇಜು ಆವರಣದಲ್ಲಿ ಹೊಡೆದು ಕೊಂದ ಯುವಕರು..! 1 ವರ್ಷದಿಂದ ಕೆಟ್ಟುಹೋಗಿತ್ತು ಕಾನೂನು ಕಾಲೇಜಿನ ಸಿಸಿಟಿವಿ..!