ಕ್ರೈಂ

ಬೆಳ್ತಂಗಡಿ : ತಾನು ವಿಷ ಕುಡಿದು ತನ್ನ ಮಕ್ಕಳಿಗೆ ವಿಷ ಕುಡಿಸಿದ ಕುಡುಕ ತಂದೆ

ಬೆಳ್ತಂಗಡಿ : ವ್ಯಕ್ತಿಯೋರ್ವ ತಾನು ವಿಷ ಕುಡಿದು  ತನ್ನ ಮಕ್ಕಳಿಗೂ ಜ್ಯೂಸ್ ನಲ್ಲಿ ವಿಷ ಬೆರಿಸಿಕೊಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ  ಬಾಳೆಗುಂಡಿಯಿಂದ ವರದಿಯಾಗಿದೆ. ಶಿಶಿಲ ಗ್ರಾಮದ ಬಾಳೆಗುಂಡಿ ನಿವಾಸಿ ವಿಶ್ವನಾಥ  ಈ ಕ್ರತ್ಯ ಎಸಗಿದ ವ್ಯಕ್ತಿ ಎಂದು ತಿಳಿದು ಬಂದಿದೆ. ವಿಶ್ವನಾಥ ಕುಡಿತದ ಚಟ ಹೊಂದಿದ್ದು, ಕುಡಿದು ಬಂದು ಪತ್ನಿ ಚಂದ್ರಾವತಿ ಜೊತೆ ಆಗಾಗ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿ ವಿಶ್ವನಾಥ ಅಪ್ರಾಪ್ತ ಮಕ್ಕಳಿಗೆ ಜ್ಯೂಸ್ ನೀಡಿದ್ದು, ಓರ್ವ ಮಗ ಜ್ಯೂಸ್ ಬೇಡವೆಂದು ನಿರಾಕರಿಸಿದ್ದಾನೆ. ಇನ್ನೋರ್ವ ಮಗನಿಗೆ ಒತ್ತಾಯ ಪೂರ್ವಕವಾಗಿ ಜ್ಯೂಸ್ ಕುಡಿಸಿದ್ದಾನೆ. ಈ ಬಗ್ಗೆ ಹೆಂಡತಿ ಪ್ರಶ್ನಿಸಿದಾಗ ವಿಶ್ವನಾಥ ‘ನಾನು ಜ್ಯೂಸ್ ನಲ್ಲಿ ಮಗನಿಗೆ ವಿಷ ಬೆರೆಸಿ ಕುಡಿಸಿದ್ದೇನೆ, ಅಷ್ಟೇ ಅಲ್ಲದೇ ನಾನು ಕೂಡ ವಿಷ ಕುಡಿದಿದ್ದೇನೆ’ ಎಂದು ಹೇಳಿದ್ದಾನೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

Related posts

ಪತ್ನಿ ಮತ್ತು 2 ಮಕ್ಕಳನ್ನು ಹೊಡೆದು ಕೊಂದ ಪತಿ! ಆತನ ಆತ್ಮಹತ್ಯೆಯ ಹಿಂದಿದೆ ರೋಚಕ ಸ್ಟೋರಿ!

ದೇವರ ಯಾತ್ರೆ ವೇಳೆ ಡಿಜೆ ವಾಹನಕ್ಕೆ ವಿದ್ಯುತ್ ಸ್ಪರ್ಶ..! 9 ಮಂದಿ ಸಾವು, 2 ಮಂದಿ ಗಂಭೀರ..!

ಫಸ್ಟ್ ನೈಟ್ ವಿಡಿಯೋ ಮಾಡಿಟ್ಟುಕೊಂಡು ಪತ್ನಿಯನ್ನೇ ಬ್ಲ್ಯಾಕ್ ​ಮೇಲ್ ಮಾಡಿದ ಸರ್ಕಾರಿ ಅಧಿಕಾರಿ..! ಮ್ಯಾಟ್ರಿಮೋನಿಯಲ್ಲಿ ಪರಿಚಯವಾಗಿದ್ದ ಗುರುರಾಜ್..!