ಕ್ರೈಂಚಿಕ್ಕಮಗಳೂರು

ಸರ್ಕಾರಿ ಜಾಗಕ್ಕೆ ರಾತ್ರೋ ರಾತ್ರಿ ಮಾರಾಮಾರಿ..! 50 ಮಂದಿಯ ಮೇಲೆ ದೂರು ದಾಖಲು, ಗ್ರಾಮದಲ್ಲಿ ಪೊಲೀಸರ ಸರ್ಪಗಾವಲು..! ದೇಗುಲದ ಸುತ್ತ ಏನಿದು ವಿವಾದ..?

155
Pc cr: Udayavani

ನ್ಯೂಸ್ ನಾಟೌಟ್: ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು… 50 ಮಂದಿಯ ಮೇಲೆ ದೂರು ಸರ್ಕಾರಿ ಜಾಗದ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದ್ದು ರಾತ್ರೋ ರಾತ್ರಿ 50 ಮಂದಿಯ ಮೇಲೆ ದೂರು ದಾಖಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರ್ಕಾರಿ ಜಾಗ ವಿವಾದ ರಾತ್ರಿಯಿಡೀ ವಿಕೋಪಕ್ಕೆ ತಿರುಗಿತ್ತು. ಇನ್ನು ಸ್ಥಳಕ್ಕೆ ಆಗಮಿಸಿದ ಪೊಲೀಸರು ಎರಡು ಗುಂಪುಗಳನ್ನು ಸಮಾಧಾನ ಪಡಿಸಲು ಯತ್ನಿಸಿದ್ರು. ಘಟನೆ ಸಂಬಂಧ 50 ಮಂದಿಯ ಮೇಲೆ ದೂರು ದಾಖಲಾಗಿದೆ. ಸರ್ಕಾರಿ ಜಾಗದಲ್ಲಿ ದೇವಾಲಯ ಕಟ್ಟಲು ಲಂಬಾಣಿ ಜನಾಂಗದವರು ಜಾಗಕ್ಕೆ ತಂತಿ ಬೇಲಿ ಹಾಕಿದ್ದರು. ಇದನ್ನು ವಿರೋಧಿಸಿ ಸಮುದಾಯ ಭವನ ಕಟ್ಟಲು ಇನ್ನೊಂದು ಸಮುದಾಯ ಪಟ್ಟು ಹಿಡಿದಿತ್ತು. ಈ ಗಲಾಟೆ ನಡುವೆಯೇ ಗ್ರಾಮದ ಕೆಲವರು ತಂತಿ ಬೇಲಿ ಕಿತ್ತು ಬಿಸಾಕಿದ್ದರು. ಹೀಗೆ ಎರಡೂ ಸಮುದಾಯದವರ ನಡುವೆ ಗಲಾಟೆ ತಾರಕಕ್ಕೇರಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

Click 👇

https://newsnotout.com/2024/05/hindu-muslim-marriage-issue-and-police
https://newsnotout.com/2024/05/vacancy-in-bmtc-conductor-job
https://newsnotout.com/2024/05/love-and-man-mistaken-and-police
https://newsnotout.com/2024/05/koragajja-cinema-director-sudhir-attavara
See also  ರಿಕ್ಷಾ-ಜೀಪು ಡಿಕ್ಕಿ, ಪ್ರಯಾಣಿಕರಿಗೆ ಗಾಯ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget