ಕ್ರೈಂದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಬಾಲಕಿಯ ಮೇಲಿನ ಭೀಕರ ಅತ್ಯಾಚಾರ ಕಂಡು ಮರಣೋತ್ತರ ಪರೀಕ್ಷೆ ವೇಳೆ ಕಣ್ಣೀರಿಟ್ಟ ವೈದ್ಯರು..! ದೇಹದ 14 ಪಕ್ಕೆಲುಬುಗಳು ಮುರಿದಿದ್ದವು ಎಂದ ವೈದ್ಯರು..!

ನ್ಯೂಸ್ ನಾಟೌಟ್: ಅಯೋಧ್ಯೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು, ಮರಣೋತ್ತರ ಪರೀಕ್ಷೆ ವೇಳೆ ಬಾಲಕಿಯ ಸ್ಥಿತಿ ನೋಡಿ ವೈದ್ಯರು ಕಣ್ಣೀರಿಟಿದ್ದಾರೆ. ಅಯೋಧ್ಯೆಯಲ್ಲಿ ನಡೆದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಸೋಮವಾರ(ಫೆ.6) ಬಂಧಿಸಿದ್ದಾರೆ.

ಅತ್ಯಾಚಾರಿಗಳಾದ ದಿಗ್ವಿಜಯ್ ಸಿಂಗ್ ಅಲಿಯಾಸ್ ಬಾಬಾ, ಹರಿರಾಮ್ ಕೋರಿ ಮತ್ತು ವಿಜಯ್ ಸಾಹು ಪೊಲೀಸರ ಮುಂದೆ ತಮ್ಮ ಅಪರಾಧಗಳನ್ನು ಒಪ್ಪಿಕೊಂಡಿದ್ದಾರೆ.

ಆಕೆಯ ಸಾವಿಗೆ ಅತಿಯಾದ ರಕ್ತಸ್ರಾವವೇ ಕಾರಣ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ. ಪೊಲೀಸ್ ಮೂಲಗಳು ಹೇಳುವಂತೆ ಇಬ್ಬರು ವೈದ್ಯರ ತಂಡವು ಮರಣೋತ್ತರ ಪರೀಕ್ಷೆ ನಡೆದಿದೆ. ಬಾಲಕಿಯ ದೇಹದ ಮೇಲೆ 30 ಸಣ್ಣ ಹಾಗೂ ದೊಡ್ಡ ಗಾಯಗಳಿದ್ದವು. ಸಂತ್ರಸ್ತೆಯ ಎರಡೂ ಬದಿಗಳಲ್ಲಿ 24 ಪಕ್ಕೆಲುಬುಗಳಲ್ಲಿ 14 ಮುರಿದಿವೆ.

ಆಕೆಯ ಖಾಸಗಿ ಅಂಗಕ್ಕೆ ಕ್ರೂರವಾಗಿ ಇರಿದಿದ್ದಾರೆ. ಎರಡಕ್ಕೂ ಹೆಚ್ಚು ವ್ಯಕ್ತಿಗಳು ಸೇರಿ ಆಕೆಯನ್ನು ಕೊಲೆ ಮಾಡಿದ್ದಾರೆ.ಘಟನೆಯ ಆರೋಪಿ ದಿಗ್ವಿಜಯ್ ಸಿಂಗ್ ಹೇಳಿಕೆ ನೀಡಿದ್ದು, ನಾವು ಆಕೆಯ ಹಿಂದೆ ಓಡಿ ಹೋಗಿ ಹೊಲದಲ್ಲಿ ಆಕೆಯನ್ನು ಹಿಡಿದಿದ್ದೆವು, ಕೋಲಿನಿಂದ ಆಕೆಯ ತಲೆಗೆ ಮೊದಲು ಪೆಟ್ಟು ಕೊಟ್ಟೆವು, ಆಕೆ ಯಾವಾಗ ಸತ್ತಿದ್ದಾಳೆ ಎಂಬುದು ನಮಗೆ ತಿಳಿದಿಲ್ಲ. ಹುಡುಗಿ ಸತ್ತಿರುವುದು ತಡವಾಗಿ ನಮಗೆ ಅರ್ಥವಾಗಿತ್ತು. ನಾವು ಆಕೆಯ ಜತೆ ಒಂದು ಗಂಟೆಗಳ ಕಾಲ ಕ್ರೂರವಾಗಿ ವರ್ತಿಸಿದ್ದೆವು, ಆಕೆಯ ದುಪಟ್ಟಾವನ್ನು ಬಾಯಿಗೆ ತುಂಬಿಸಿದ್ದೆವು, ಆಕೆ ವಿರೋಧಿಸುತ್ತಲೇ ಇದ್ದಳು, ನಾವೆಲ್ಲರೂ ಕುಡಿದಿದ್ದೆವು, ಆದ್ದರಿಂದ ಕೋಪಗೊಂಡು ಆಕೆಗೆ ಹೊಡಿದಿದ್ದೆವು ಎಂದು ಹೇಳಿದ್ದಾನೆ.

Click

ಬಾಲಕನ ಕೆನ್ನೆಯ ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ ನರ್ಸ್ ಅಮಾನತ್ತು..! ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದ್ದೇನು..?

Related posts

ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋದ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಕರಿಕೆ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ 18 ವರ್ಷದ ಯುವತಿ, ಸಾವಿನ ಹಿಂದಿರುವ ಕಾರಣ ನಿಗೂಢ

ಬೈಕ್ ಕಳ್ಳನಿಗೆ ದೇವರೇ ಕೊಟ್ಟ ಶಿಕ್ಷೆ…. ಏನು ಗೊತ್ತೆ..?