Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದ ಆರೋಪಿ 11 ವರ್ಷಗಳ ಬಳಿಕ ಅರೆಸ್ಟ್..! ಪೊಲೀಸರಿಗೆಯೇ ʼಇನ್ಫಾರ್ಮರ್ʼ ಆಗಿ ಕೆಲಸ ಮಾಡುತ್ತಿದ್ದ ಭೂಪ..!

686

ನ್ಯೂಸ್‌ ನಾಟೌಟ್ : ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ, ಜೈಲಿನಿಂದ ತಪ್ಪಿಸಿಕೊಂಡು 11 ವರ್ಷಗಳಿಂದ ಮಹಾರಾಷ್ಟ್ರದಲ್ಲಿ ತಲೆ ಮರೆಸಿಕೊಂಡು, ಅಲ್ಲಿನ ಪೊಲೀಸರಿಗೆಯೇ ಇನ್ಫಾರ್ಮರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಕಲಬುರಗಿ ಸಬ್-ಅರ್ಬನ್ ಪೊಲೀಸರು ಕಾರ್ಯಾಚರಣೆ ನಡೆಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಡಾ.ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ.

ಚಿತ್ತಾಪೂರ ತಾಲೂಕಿನ ಭಾಗೋಡಿ ಅಂಬರೀಷ ಅಂಬಾದಾಸ ನಾಟಿಕಾರ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
2009ರಲ್ಲಿ ನಗರದ ಬಿದ್ದಾಪೂರ ಕಾಲೋನಿಯ ಜೆ.ಬಿ ಕಾಂಪ್ಲೆಕ್ಸ್ ಹತ್ತಿರದಲ್ಲಿ ನಡೆದ ಇಬ್ಬರ ನಡುವಿನ ಗಲಾಟೆಗೆ ಸಂಬಂಧಿಸಿದಂತೆ ಬಂಜಾರಾ ಕ್ರಾಸ್ ಹತ್ತಿರ ಆರೋಪಿ ಅಂಬರೀಷ ಕರ್ತವ್ಯದ ಮೇಲೆ ಇದ್ದ ಅಶ್ವಿನ್ ಕುಮಾರ್ ಎಂಬ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಿದ್ದ. ಈ ಪ್ರಕರಣದಲ್ಲಿ ಜಿಲ್ಲಾ ಸತ್ರ ನ್ಯಾಯಾಲಯವು 2011 ರಂದು ಆರೋಪಿ ಅಂಬರೀಷಗೆ ಜೀವಾವಧಿ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿ ಆದೇಶಿಸಿತ್ತು.

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಇತರೆ ಶಿಕ್ಷಾಬಂಧಿ ಆರೋಪಿಗಳೊಂದಿಗೆ ಜಗಳ ಮಾಡಿಕೊಂಡಾಗ, ಆರೋಪಿಯನ್ನು ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು. 2014ರಲ್ಲಿ ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಅನಾರೋಗ್ಯ ವಿಚಾರಕ್ಕೆ ಆರೋಪಿಯನ್ನು ದಾಖಲು ಮಾಡಿದಾಗ ಸಿಬ್ಬಂದಿಗಳ ಕಣ್ಣು ತಪ್ಪಿಸಿ, ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶೇಲ್ ವಾರ್ಡ್ ನಿಂದ ಪರಾರಿಯಾಗಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ ವಿಜಯಪುರ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಸರ್ಕಾರಿ ಬಸ್ ನಲ್ಲಿ ಯುವತಿ ಮೇಲೆ ಅತ್ಯಾಚಾರ..! ಪೊಲೀಸ್‌ ಠಾಣೆಯಿಂದ 100 ಮೀ. ವ್ಯಾಪ್ತಿಯಲ್ಲಿ ನಿಂತಿದ್ದ ಬಸ್..!

ಆರೋಪಿಯ ಪತ್ತೆಗಾಗಿ ಕಲಬುರಗಿ ನಗರದ ಸಬ್-ಅರ್ಬನ್ ಉಪವಿಭಾಗ ಪೊಲೀಸರು ಫೆ.26 ರಂದು ಆರೋಪಿಯನ್ನು ಪುಣೆ ನಗರದಲ್ಲಿ ವಶಕ್ಕೆ ಪಡೆದು, ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

See also  ಚಿಲ್ಲರೆಗಾಗಿ ಮಹಿಳಾ ಬಸ್ ಕಂಡಕ್ಟರ್‌ ಮೇಲೆ ಹಲ್ಲೆ..! ಏನಿದು ಘಟನೆ..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget