ಕ್ರೈಂವೈರಲ್ ನ್ಯೂಸ್

ಡ್ಯೂಟಿ ಬದಲಿಸಿದ್ದಕ್ಕೆ ಠಾಣೆಯಲ್ಲಿ ಆತ್ಮಹತ್ಯೆಯ ನಾಟಕವಾಡಿದ ಪೋಲಿಸ್ ಪೇದೆ..! ಈ ಬಗ್ಗೆ ವೈದ್ಯರು ಹೇಳಿದ್ದೇನು..?

147

ನ್ಯೂಸ್ ನಾಟೌಟ್: ಡ್ಯೂಟಿ ಬದಲಿಸಿದ್ದಕ್ಕೆ ಪೊಲೀಸ್ ಪೋಲಿಸ್ ಪೇದೆ ಮುದಕಪ್ಪ ಉದಗಟ್ಟಿ ಎಂಬವರು ಆತ್ಮಹತ್ಯೆಯ ನಾಟಕ ಮಾಡಿದ ವಿಚಿತ್ರ ಘಟನೆ ಬೆಳಗಾವಿಯ ಉದ್ಯಮಬಾಗ ಠಾಣೆಯಲ್ಲಿ ಬುಧವಾರ(ಜ.1) ರಾತ್ರಿ ನಡೆದಿದೆ.

ಮುದಕಪ್ಪ ಅವಾಂತರದಿಂದಾಗಿ ಠಾಣೆಯ ಪಿಐ ಡಿಕೆ ಪಾಟೀಲ್ ಲೋ ಬಿಪಿ ಆಗಿ ಆಸ್ಪತ್ರೆ ಸೇರುವಂಥದೆ. ಘಟನೆ ಬಗ್ಗೆ ಇದೀಗ ಬೆಳಗಾವಿ ಪೊಲೀಸ್ ಆಯುಕ್ತ ಯುಡಾ ಮಾರ್ಟಿನ್ ಅವರಿಗೂ ಮಾಹಿತಿ ನೀಡಲಾಗಿದೆ.

ಮುದಕಪ್ಪ ಎರಡು ದಿನ ರಜೆ ಹೋಗಿ ಬಂದಿದ್ದರು. ಹೀಗಾಗಿ ಅವರಿಗೆ ಪಿಐ ಡ್ಯೂಟಿ ಬದಲಿಸಿದ್ದರು. ಕರ್ತವ್ಯ ನಿಯೋಜಿಸಿದ ಜಾಗಕ್ಕೆ ಹೋಗಬೇಕೆಂದು ಸೂಚನೆ ನೀಡಿದ್ದರು. ಆದರೆ ಇದಕೊಪ್ಪದ ಮುದಕಪ್ಪ, ವಿಷ ಸೇವಿಸುತ್ತೇನೆ ಎಂದು ಹೇಳಿದ್ದಲ್ಲದೆ ಬಿದ್ದು ಹೊರಳಾಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆರೋಗ್ಯ ತಪಾಸಣೆ ಮಾಡಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು, ಮುದಕಪ್ಪ ವಿಷ ಸೇವಿಸಿಲ್ಲ ಎಂದು ದೃಢಪಡಿಸಿದ್ದಾರೆ. ಬಳಿಕ ಮೇಲಾಧಿಕಾರಿಗಳು ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ.

ಆದರೆ ಇಷ್ಟೆಲ್ಲ ಆಗುವಾಗ ಪಿಐ ಡಿಕೆ ಪಾಟೀಲ್ ಅಸ್ವಸ್ಥಗೊಂಡಿದ್ದಾರೆ. ಅವರಿಗೆ ಲೋ ಬಿಪಿ ಆಗಿದ್ದು ಆಸ್ಪತ್ರೆಗೆ ದಾಖಲಿಸಲಾಯಿತು. ಈ ವಿಚಾರ ತಿಳಿದು ಎಸಿಪಿ ಶೇಖರಪ್ಪ ಉದ್ಯಮಬಾಗ ಠಾಣೆಗೆ ಆಗಮಿಸಿ, ಘಟನೆಯ ಸಂಪೂರ್ಣ ಮಾಹಿತಿ ಪಡೆದರು. ನಂತರ ಬೆಳಗಾವಿ ಪೊಲೀಸ್ ಕಮಿಷನರ್ ಅವರಿಗೂ ವಿವರಗಳನ್ನು ತಿಳಿಸಿದರು.

Click

https://newsnotout.com/2025/01/police-control-room-kannada-news-student-issue-viral-news/
https://newsnotout.com/2025/01/kannada-news-ksrtc-bus-issue-break-fail-s-matter-d/
https://newsnotout.com/2025/01/yamaha-bike-showroom-kannada-news-more-than-50-bikes-hd/
See also  ಮಂಗಳೂರು: ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿಯ ಕೊಲೆ ಕೇಸ್ ಗೆ ಸಂಬಂಧಿಸಿ 20 ಆರೋಪಿಗಳು ಅರೆಸ್ಟ್..! ಇನ್ನಷ್ಟು ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget