ನ್ಯೂಸ್ ನಾಟೌಟ್: ಕಲಬುರಗಿಯ ವಾಡಿ ಪೊಲೀಸ್ ಠಾಣೆಯಲ್ಲಿ ಜೂಜಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸರನ್ನು ಅಮಾನತ್ತುಗೊಳಿಸಲಾಗಿದೆ.
ಪೊಲೀಸ್ ಠಾಣೆಯೊಳಗೆ ಜೂಜಾಟದಲ್ಲಿ ತೊಡಗಿದ್ದ ಎಎಸ್ ಐ ಮಹಿಮೂದ್ ಮಿಯಾ, ಹೆಡ್ ಕಾನ್ಸ್ ಟೇಬಲ್ ಗಳಾದ ನಾಗರಾಜ್, ಸಾಯಿಬಣ್ಣಾ, ಇಮಾಮ್, ಕಾನ್ಸ್ ಟೇಬಲ್ ನಾಗಭೂಷಣ್ ಎಂಬವರನ್ನ ಅಮಾನತ್ತುಗೊಳಿಸಿ ಕಲಬುರಗಿ ಎಸ್ ಪಿ ಅಡ್ಡೂರು ಶ್ರೀನಿವಾಸಲು ಆದೇಶ ಹೊರಡಿಸಿದ್ದಾರೆ.
ಜೊತೆಗೆ ವಾಡಿ ಠಾಣೆಯ ಪಿಎಸ್ ಐ ತಿರುಮಲೇಶ್ ಗೂ ನೋಟಿಸ್ ಜಾರಿ ಮಾಡಿದ್ದು, ಕಾರಣ ನೀಡುವಂತೆ ಎಸ್ ಪಿ ಕೇಳಿದ್ದಾರೆ ಎಂದು ವರದಿ ತಿಳಿಸಿದೆ.
Follow us for more updates:
YouTube : https://www.youtube.com/@newsnotout8209
FB PAGE : https://www.facebook.com/NewsNotOut2023
Insta : https://www.instagram.com/newsnotout/
Website : https://newsnotout.com/
Join our Telegram: https://t.me/+ZnCGhAIeG9QxODRl
Tweet : https://twitter.com/News_Not_Out