Latestಕ್ರೈಂರಾಜ್ಯ

ಮಗು ಹಠ ಮಾಡ್ತಿದೆ ಎಂದು ಡೈಪರ್‌ ಗೆ ಖಾರದ ಪುಡಿ ಹಾಕಿದ ಅಂಗನವಾಡಿ ಸಹಾಯಕಿ..! ಪೊಲೀಸ್ ಠಾಣೆಯಲ್ಲಿ ದೂರು ದಾಖಲು..!

709

ನ್ಯೂಸ್ ನಾಟೌಟ್: ಮಗು ಹಠ ಮಾಡುತ್ತಿದೆ ಎಂದು ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈಗೆ ಬರೆ ಎಳೆದು, ಡೈಪರ್‌ ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ರಾಮನಗರದ ಕನಕಪುರ ತಾಲೂಕಿನ ಮಹರಾಜಕಟ್ಟೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಮೇಶ್ ಹಾಗೂ ಚೈತ್ರಾ ದಂಪತಿಯ ಎರಡೂವರೆ ವರ್ಷದ ಮಗು ಮೇಲೆ ಅಂಗನವಾಡಿ ಸಹಾಯಕಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಅಂಗನವಾಡಿಯಲ್ಲಿ ಮಗು ಹಠ ಮಾಡುತ್ತಿದೆ ಎಂದು ಕೈ ಮೇಲೆ ಬರೆ ಹಾಕಿ ಬಳಿಕ ಡೈಪರ್ ಒಳಗೆ ಚಂದ್ರಮ್ಮ ಎಂಬವರು ಖಾರದಪುಡಿ ಹಾಕಿದ್ದರು.

ಅಂಗನವಾಡಿಯಿಂದ ಮಗು ಕರೆತರಲು ಹೋದಾಗ ಪೋಷಕರಿಗೆ ಹಲ್ಲೆಯ ವಿಚಾರ ತಿಳಿದಿದೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಅಂಗನವಾಡಿ ಸಹಾಯಕಿ ಚಂದ್ರಮ್ಮ ವಿರುದ್ಧ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  

See also  ರಾತ್ರಿ BJP ನಾಯಕನ ನಿವಾಸದ ಬಳಿ ಭಾರೀ ಸ್ಫೋಟ..! ಬೆಚ್ಚಿಬಿದ್ದ ಗಾಢ ನಿದ್ರೆಯಲ್ಲಿದ್ದ ಜನ..!
  Ad Widget   Ad Widget   Ad Widget   Ad Widget   Ad Widget