ಕ್ರೈಂದೇಶ-ವಿದೇಶವೈರಲ್ ನ್ಯೂಸ್

ಭದ್ರತಾ ಪಡೆಗಳ ಗುಂಡಿಗೆ 7 ನಕ್ಸಲರು ಬಲಿ..! ಮಾವೋವಾದಿಗಳ ಶವಗಳನ್ನು ವಶಪಡಿಸಿಕೊಂಡ ಪೊಲೀಸ್

131

ನ್ಯೂಸ್ ನಾಟೌಟ್: ಛತ್ತೀಸ್‌ ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ ಕೌಂಟರ್‌ನಲ್ಲಿ ಕನಿಷ್ಠ ಏಳು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.‌

ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಜಂಟಿ ತಂಡವು ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ದಕ್ಷಿಣ ಅಬುಜ್‌ ಮದ್‌ ನ ಕಾಡಿನಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ 7 ಮಂದಿ ನಕ್ಸಲರು ಹತರಾಗಿದ್ದಾರೆ.

ಸಿಆರ್‌ಪಿಎಫ್ ತಂಡಗಳಲ್ಲದೆ ನಾರಾಯಣಪುರ, ದಾಂತೇವಾಡ, ಬಸ್ತಾರ್ ಮತ್ತು ಕೊಂಡಗಾಂವ್ ಜಿಲ್ಲೆಗಳ ಪೊಲೀಸ್‌ ನ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ಚಕಮಕಿ ಬಳಿಕ ಸಮವಸ್ತ್ರ ಧರಿಸಿದ್ದ ಏಳು ಮಾವೋವಾದಿಗಳ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Click

https://newsnotout.com/2024/12/mother-and-2-child-kannada-news-viral-news-bengaluru/
https://newsnotout.com/2024/12/kannada-news-teaching-chennai-school-girl-get-unconcious/
https://newsnotout.com/2024/12/kannada-news-g-kannada-news-police-d-odisha/
https://newsnotout.com/2024/12/udupi-fishing-man-and-theft-4-lakh-rupees-case-police/
https://newsnotout.com/2024/12/indian-army-kannada-news-jammu-and-kashmir-solider-d/
https://newsnotout.com/2024/12/tamil-nadu-kannada-news-12-district-tamilnadu-hf/
https://newsnotout.com/2024/12/puttur-breeza-car-collision-kannada-news-viral-news-d/
See also  ಸಂಪಾಜೆಯ ವ್ಯಕ್ತಿ ಎರ್ನಾಕುಲಂನಲ್ಲಿ ಕಾಣೆ
  Ad Widget   Ad Widget     Ad Widget   Ad Widget   Ad Widget   Ad Widget