ಕರಾವಳಿಕಾಸರಗೋಡುಕ್ರೈಂವೈರಲ್ ನ್ಯೂಸ್

ಕರ್ನಾಟಕದ ಪೊಲೀಸ್‌ ಅಧಿಕಾರಿಗಳನ್ನು ಕೇರಳ ಪೊಲೀಸರು ವಶಕ್ಕೆ ಪಡೆದದ್ದೇಕೆ? ಆರೋಪಿಗಳನ್ನು ಬಂಧಿಸಲು ಕೇರಳಕ್ಕೆ ತೆರಳಿದ್ದ ಕರ್ನಾಟಕ ಪೊಲೀಸರು ಮಾಡಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

242

ನ್ಯೂಸ್‌ ನಾಟೌಟ್‌: ವಂಚನೆ ಪ್ರಕರಣದ ಆರೋಪಿಗಳಿಂದ ಲಂಚ ಪಡೆದ ಆರೋಪದಲ್ಲಿ ‍ಇನ್ಸ್‌ಪೆಕ್ಟರ್‌ ಸೇರಿ 4 ಮಂದಿ ಕರ್ನಾಟಕದ ಪೊಲೀಸ್‌ ಅಧಿಕಾರಿಗಳನ್ನು ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

ಕರ್ನಾಟಕದಲ್ಲಿ ನಡೆದ ವಂಚನೆ ಪ್ರಕರಣದ ಸಂಬಂಧ ಆರೋಪಿಯನ್ನು ಬಂಧಿಸಲು ಕರ್ನಾಟಕ ಪೊಲೀಸರು ಆಗಸ್ಟ್ 1ರಂದು ಕೊಚ್ಚಿಗೆ ತೆರಳಿದ್ದರು. ಅಲ್ಲಿ ಅವರು ಇಬ್ಬರು ಆರೋಪಿಗಳಿಂದ ₹ 3.95 ಲಕ್ಷ ಲಂಚ ಪಡೆದಿದ್ದಾರೆ ಎಂದು ಆರೋಪ ಮತ್ತು ದೂರಿನನ್ವಯ ಕೊಚ್ಚಿಯ ಕಮಲಶ್ಶೇರಿ ಪೊಲೀಸರು ಕರ್ನಾಟಕದ 4 ಪೊಲೀಸ್ ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಕೊಚ್ಚಿ ಪೊಲೀಸ್‌ ಉಪ ಆಯುಕ್ತ ಬೇಬಿ ಪಿವಿ, ‘ಪ್ರಕರಣ ಸಂಬಂಧ ನಾವು ಕರ್ನಾಟಕ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರ ಗುರುತು ಹಾಗೂ ಕೊಚ್ಚಿಗೆ ಬಂದಿರುವ ಉದ್ದೇಶದ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಮಾಹಿತಿ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಪ್ರಕರಣ ದಾಖಲಾಗಿದೆ‘ ಎಂದು ಹೇಳಿದ್ದಾರೆ.
ಪರಿಶೀಲನೆ ಬಳಿಕ ವಶಕ್ಕೆ ಪಡೆದವರ ಮಾಹಿತಿ ನೀಡುವುದಾಗಿ ಪೊಲೀಸರು ಹೇಳಿದ್ದಾರೆ. ಬೆಂಗಳೂರಿನ ವೈಟ್‌ಫೀಲ್ಡ್‌ನಿಂದ ಈ ಪೊಲೀಸರು ತೆರಳಿದ್ದರು ಎಂದು ಮಾಹಿತಿ ದೊರೆತಿದೆ.

See also  ಬೆಂಗಳೂರು-ಗುವಾಹಟಿ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ..! ದಟ್ಟ ಹೊಗೆ ಕಂಡು ಭಯಭೀತರಾದ ಪ್ರಯಾಣಿಕರು..!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget