ಶಿಕ್ಷಣಸುಳ್ಯ

ಕೆ.ವಿ.ಜಿ.ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ “ಕರ್ನಾಟಕ ಸುವರ್ಣ ಸಂಭ್ರಮ”, ವಿದ್ಯಾರ್ಥಿಗಳಿಂದ ಕನ್ನಡ ಗೀತ ಗಾಯನ ಹಾಗೂ ಭಾಷಣ

161

ನ್ಯೂಸ್ ನಾಟೌಟ್ : ಸುಳ್ಯದ ಕೆ.ವಿ.ಜಿ.ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ “ಕರ್ನಾಟಕ ಸುವರ್ಣ ಸಂಭ್ರಮ” ಆಚರಣೆ ಕಾಲೇಜಿನ ಸಭಾಂಗಣದಲ್ಲಿ ನ.1 ರಂದು ನಡೆಯಿತು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ಕನ್ನಡ ಗೀತ ಗಾಯನ ಹಾಗೂ ಭಾಷಣ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ವಿಭಾಗ ಮುಖ್ಯಸ್ಥರುಗಳಾದ ದೇವರಾಜ್ ಜಿ.ಕೆ, ರಮಾದೇವಿ, ಯತೀಶ್ ಕೆ.ಎನ್, ಬಿಂದು ಕೆ.ವಿ.ವಿದ್ಯಾರ್ಥಿ ಕ್ಷೇಮಾಧಿಕಾರಿ ಸುನಿಲ್ ಕುಮಾರ್ ಎನ್.ಪಿ ಉಪಸ್ಥಿತರಿದ್ದರು. ಸಿವಿಲ್ ವಿಭಾಗದ ಶಿಕ್ಷಕ ನಾರಾಯಣ ಪಾಟಾಳಿ ಕಾರ್ಯಕ್ರಮ ಸಂಘಟಿಸಿ, ನಿರೂಪಿಸಿದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಸಂಘಟನೆಗೆ ಸಹಕರಿಸಿದರು.

See also  ಸುಬ್ರಹ್ಮಣ್ಯ:ಕುಮಾರಪರ್ವತ ಚಾರಣಕ್ಕೆ ಮತ್ತೆ ನಿರ್ಬಂಧ,ಕಾರಣಗಳೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget