Uncategorized

ಅಂಚೆ ಕಚೇರಿಯ ಮೇಲೆ ಸಿಬಿಐ ದಾಳಿ..! ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ..!

ನ್ಯೂಸ್ ನಾಟೌಟ್: ಅಂಚೆ ಕಚೇರಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದ ಆರೋಪದ ಮೇಲೆ ಸಿಬಿಐ ದಾಳಿ ನಡೆಸಿದ ಮರು ದಿನ ಅಂಚೆ ಕಚೇರಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

ಬುಲಂದ್‌ಶಹರ್ ನಲ್ಲಿ ಅಂಚೆ ಕಚೇರಿಯ ಮುಖ್ಯ ಕಚೇರಿಯ ಮೇಲೆ ಸಿಬಿಐ ನ ಭ್ರಷ್ಟಾಚಾರ ನಿಗ್ರಹ ಪಡೆ ದಾಳಿ ನಡೆಸಿತ್ತು. ನಿವೃತ್ತ ಫೀಲ್ಡ್ ಆಫೀಸರ್ ಸೇರಿದಂತೆ ಎಂಟು ನೌಕರರು ಲಂಚದ ಬೇಡಿಕೆಯ ಆರೋಪ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿತ್ತು.
ಸೂಪರಿಂಟೆಂಡೆಂಟ್ ತ್ರಿಭುವನ್ ಪ್ರತಾಪ್ ಸಿಂಗ್ ಇಂದು(ಆ.21) ಬೆಳಗ್ಗೆ ಅಲಿಗಢ್‌ನಲ್ಲಿರುವ ತಮ್ಮ ಮನೆಯಲ್ಲಿ ಪರವಾನಗಿ ಪಡೆದ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾಳಿಯಿಂದಾಗಿ ಸಿಂಗ್ “ಅತ್ಯಂತ ಒತ್ತಡಕ್ಕೆ ಒಳಗಾಗಿದ್ದರು” ಎಂದು ಪೊಲೀಸರು ಶಂಕಿಸಿದ್ದಾರೆ.
ಆದರೆ, ದಾಳಿಯಿಂದಾಗಿ ಅವರು ಒತ್ತಡದಲ್ಲಿದ್ದರು ಎಂದು ಅವರ ಕುಟುಂಬ ನಿರಾಕರಿಸಿದೆ. ಮಹಿಳೆ ಮತ್ತು ಕೆಲವು ಅಧಿಕಾರಿಗಳು ತಮ್ಮ ಪರ ಕೆಲಸ ಮಾಡುವಂತೆ ಒತ್ತಡ ಹೇರುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಅಲಿಘರ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಯನ್ನು ಉದ್ದೇಶಿಸಿ ಡೆತ್ ನೋಟ್ ಬರೆದಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Click

https://newsnotout.com/2024/08/govt-hospital-chintamani-kannadanews-police-case-old-age-issue/
https://newsnotout.com/2024/08/fir-on-protested-perents-kannada-news-school-students-issue/
https://newsnotout.com/2024/08/serial-ki-kannada-news-kkenya-42-womens-are-suspence-nomore-j/
https://newsnotout.com/2024/08/baby-bites-snake-kannada-news-and-doctor-reveals-fact/
https://newsnotout.com/2024/08/bantwal-netravathi-river-issue-kannada-news-body-found/
https://newsnotout.com/2024/08/hijra-case-boy-suspence-issue-at-bengaluru-kannada-news-police/

Related posts

ರಾತ್ರಿ ತಡವಾಗಿ ಬಂದವನಿಗೆ ಊಟ ಇಲ್ಲ ಎಂದ ಹೋಟೆಲ್ ಸಿಬ್ಬಂದಿ..! ಸಿಟ್ಟಿಗೆದ್ದು ಲಾರಿನ್ನು ಹೋಟೆಲ್ ಗೆ ನುಗ್ಗಿಸಿದ ಚಾಲಕ..! ಇಲ್ಲಿದೆ ವೈರಲ್ ವಿಡಿಯೋ

ಪೆರಾಜೆ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್..!, ಮರ ಬಿದ್ದು ಸಂಚಾರ ಅಸ್ತವ್ಯಸ್ತ, 2 ಕಿ.ಮೀ. ಟ್ರಾಫಿಕ್ ಜಾಮ್..!

ಹಿರಿಯ ನಟ ಮಿಥುನ್ ಚಕ್ರವರ್ತಿ ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 70ನೇ ರಾಷ್ಟ್ರೀಯ ಚಲನಚಿತ್ರ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ