ಕ್ರೈಂರಾಜ್ಯ

ಜೆಡಿಎಸ್ ನಾಯಕಿನ್ನ ಗನ್ ಪಾಯಿಂಟ್ ನಲ್ಲಿಟ್ಟು ಪ್ರಜ್ವಲ್ ರೇವಣ್ಣ ಅತ್ಯಾಚಾರ, ನಾನು ಕರೆದಾಗಲೆಲ್ಲ ಬರಬೇಕು, ಇಲ್ಲಂದ್ರೆ ನಿನ್ನ ಗಂಡನ ಸಾಯಿಸ್ತೀನಿ..! ಬೆತ್ತಲಾಗುತ್ತಿದೆ ಪ್ರಜ್ವಲ್ ರಾವಣನ ಕಾಮಕಾಂಡ

171

ನ್ಯೂಸ್ ನಾಟೌಟ್: ವಿಶ್ವದ ವಿಕೃತ ಕಾಮಿಗಳನ್ನೆಲ್ಲ ಮೀರಿ ಮಾಜಿ ಸಚಿವ ಎಚ್ ಡಿ ರೇವಣ್ಣನ ಪುತ್ರ ಹಾಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬೆಳೆದಿದ್ದಾನೆ. ಆತನ ಪೆನ್ ಡ್ರೈವ್ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈತನ ವಿರುದ್ಧ ಹಲವಾರು ಸಂತ್ರಸ್ತ ಮಹಿಳೆಯರು ದೂರು ನೀಡುತ್ತಿದ್ದಾರೆ. ಇದೀಗ ಜೆಡಿಎಸ್ ನಾಯಕಿಯನ್ನೇ ಗನ್ ಪಾಯಿಂಟ್ ನಲ್ಲಿಟ್ಟು ಅತ್ಯಾಚಾರ ಮಾಡಿದ್ದ, ಮಾತ್ರವಲ್ಲ ಈ ವಿಚಾರವನ್ನು ಹೊರಗೆ ಹೇಳಿದ್ರೆ ನಿನ್ನ ಗಂಡನ ಸಾಯಿಸಿ ಬಿಡ್ತೀನಿ, ನಾನು ಕರೆದಾಗಲೆಲ್ಲ ನೀನು ಬರಬೇಕು, ನನಗೆ ಖುಷಿ ಪಡಿಸಬೇಕು, ಇಲ್ಲಂದ್ರೆ ನಿನ್ನ ವಿಡಿಯೋವನ್ನೆಲ್ಲ ಜಾಲತಾಣದಲ್ಲಿ ಹಾಕಿ ಬಿಡ್ತೀನಿ ಅಂತ ಪ್ರಜ್ವಲ್ ರೇವಣ್ಣ ಬೆದರಿಸಿದ್ದ ಎಂದು ದೂರಿನಲ್ಲಿ ಸಂತ್ರಸ್ತ ಮಹಿಳೆ ಹೇಳಿಕೊಂಡಿದ್ದಾರೆ.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಕೊಟ್ಟ ದೂರಿನಲ್ಲಿ ಹಲವಾರು ಸ್ಫೋಟಕ ವಿಚಾರಗಳು ಬೆಳಕಿಗೆ ಬಂದಿದೆ. ಜೆಡಿಎಸ್ ನಾಯಕಿ ತಮ್ಮ ಮೇಲೆ ಯಾವಾಗ ಅತ್ಯಾಚಾರ ನಡೆದಿದೆ ಎಂಬ ಸಂಗತಿಯನ್ನೂ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. 2021ರಲ್ಲಿ ಬಿಸಿಎಂ ಹಾಸ್ಟೆಲ್ ವಿಚಾರದ ಬಗ್ಗೆ ಸಂಸದ ಪ್ರಜ್ವಲ್ ರೇವಣ್ಣ ಅವರ ಬಳಿ ಮಾತನಾಡಲು ಹೋದಾಗ ತಮ್ಮ ಮೇಲೆರಗಿದ್ದಾರೆ ದೂರಿನಲ್ಲಿ ತಿಳಿಸಿದ್ದಾರೆ. ಈ ವೇಳೆ ತಾವು ನಿರಾಕರಣೆ ಮಾಡಿದಾಗ ಗನ್ ಹಿಡಿದು ಹೆದರಿಸಿ ಬಲಾತ್ಕಾರ ಮಾಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಹಾಸನದಲ್ಲಿರುವ ಸಂಸದರ ಬಂಗಲೆಯ ಮಹಡಿ ರೂಮ್‌ನಲ್ಲೇ ರೇಪ್ ಮಾಡಲಾಗಿದೆ ಎಂದು ಮಹಿಳೆ ಆರೋಪ ಮಾಡಿದ್ದಾರೆ.

ಪ್ರಜ್ವಲ್ ಮೇಲೆರಗುತ್ತಿದ್ದಂತೆ ಜೆಡಿಎಸ್ ನಾಯಕಿ ಅದನ್ನು ನಿರಾಕರಿಸಿದ್ದಾರೆ. ಈ ವೇಳೆ ಇದಕ್ಕೆ ಪ್ರತಿಕ್ರಿಯಿಸಿದ ಪ್ರಜ್ವಲ್ ರೇವಣ್ಣ, ನೀನು ಒಪ್ಪದಿದ್ದರೆ ನಿನ್ನ ಗಂಡನ ಸಾಯಿಸಿ ಬಿಡ್ತಿನಿ ಎಂದು ಎಸ್ ಐಟಿ ಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ತಮ್ಮ ಮೇಲೆ ಬಲಾತ್ಕಾರ ಮಾಡಿದ್ದಲ್ಲದೆ, ಅದನ್ನು ಚಿತ್ರೀಕರಣ ಮಾಡಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಬಾಯಿ ಬಿಟ್ಟರೆ ಸೋಷಿಯಲ್‌ ಮೀಡಿಯಾದಲ್ಲಿ ನಿನ್ನ ವಿಡಿಯೊವನ್ನು ಬಿಡುತ್ತೇನೆ ಎಂಧು ಬೆದರಿಕೆ ಒಡ್ಡಿದ್ದಾರೆ. ನಾನು ಕರೆದಾಗೆಲ್ಲ ನೀನು ಬರಬೇಕು. ಇಲ್ಲದಿದ್ದರೆ ನನ್ನ ಬಳಿ ಇರುವ ವಿಡಿಯೊವನ್ನು ಹರಿಬಿಡುತ್ತೇನೆ ಎಂದು ಬೆದರಿಸಿ ಕಳುಹಿಸಿದ್ದಾರೆ. ಇಷ್ಟೇ ಅಲ್ಲದೆ, ಪದೇ ಪದೆ ವಿಡಿಯೊ ಕಾಲ್‌ ಮಾಡಿ ಬೆತ್ತಲೆಯಾಗು ತಾನು ನೋಡಬೇಕು ಎಂದು ಕಿರುಕುಳ ಕೊಟ್ಟು ನಗ್ನತೆಯನ್ನು ನೋಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ‌ಅಲ್ಲದೆ, ಪದೇ ಪದೆ ತಮಗೆ ಬ್ಲ್ಯಾಕ್‌ಮೇಲ್‌ ಮಾಡಿ ಬಲಾತ್ಕಾರ ಮಾಡುತ್ತಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

See also  ಕನಕಮಜಲು: ಕಾಳು ಮೆಣಸು ಕೊಯ್ಯುತ್ತಿರುವಾಗ ತೆಂಗಿನ ಮರದಿಂದ ಕೆಳಕ್ಕೆ ಬಿದ್ದ 70 ವರ್ಷದ ವೃದ್ದ, ಆಸ್ಪತ್ರೆ ಸೇರುವಷ್ಟರಲ್ಲಿ ಹಾರಿ ಹೋಗಿತ್ತು ಪ್ರಾಣ ಪಕ್ಷಿ..!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget