ಕ್ರೈಂದೇಶ-ಪ್ರಪಂಚದೇಶ-ವಿದೇಶರಾಜಕೀಯರಾಜ್ಯ

ವಿಚಾರಣೆಗೆ ಹಾಜರಾಗಲು ಭವಾನಿ ರೇವಣ್ಣಗೆ ಮತ್ತೊಂದು ನೋಟಿಸ್..! ನೋಟಿಸ್ ನಲ್ಲೇನಿದೆ..? ಭವಾನಿ ರೇವಣ್ಣ ಬಂಧನವಾಗುತ್ತಾ..?

ನ್ಯೂಸ್‌ ನಾಟೌಟ್‌: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಮತ್ತೊಂದು ನೋಟಿಸ್ ನೀಡಿದೆ. ಮಗನ ಬಂಧನದ ಬೆನ್ನಲ್ಲೇ ಮತ್ತೆ ಭವಾನಿ ರೇವಣ್ಣನಿಗೆ ನೋಟಿಸ್ ನೀಡಿದ್ದಾರೆ. 15-05-24 ರಂದು ನೀಡಿದ ನೋಟಿಸ್‌ಗೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದೀರಿ.

ಆದರೆ ಈ ಹಿಂದೆ ನೀಡಿದ್ದ ನೋಟಿಸ್‌ಗೆ ನೀವು ಉತ್ತರಿಸಿಲ್ಲ. ಈ ಪ್ರಕರಣದಲ್ಲಿ ನೀವು ವಿಚಾರಣೆಗೆ ಒಳಪಡುವ ಅವಶ್ಯಕತೆ ಇದೆ. ಆದ್ದರಿಂದ ಜೂ.1 ರಂದು ಖುದ್ದು ಹಾಜರಾಗುವಂತೆ ನೋಟಿಸ್ ನೀಡಿದೆ. ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಆಗಮಿಸುತ್ತೇವೆ. ಆ ಸಂದರ್ಭ ಖುದ್ದು ಮನೆಯಲ್ಲಿ ಹಾಜರಿರಬೇಕೆಂದು ಎಸ್‌ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಕಳೆದ ಹದಿನೈದು ದಿನಗಳಿಂದ ಭವಾನಿ ರೇವಣ್ಣ ಅವರು ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ.

ಮೇ 4 ರಂದು ಸಂತ್ರಸ್ತೆಯರ ಸ್ಥಳ ಮಹಜರ್ ವೇಳೆ ಹೊಳೆನರಸೀಪುರ ಮನೆಯಲ್ಲಿ ಭವಾನಿ ರೇವಣ್ಣ ಹಾಜರಿದ್ದರು. ಮೇ 6 ರಂದು ಅವರನ್ನು ಜಿಲ್ಲೆಯ ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರು ಭೇಟಿಯಾಗಿದ್ದರು. ಭೇಟಿ ಬಳಿಕ ಮನೆಯಿಂದ ಹೋದವರು ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಇತ್ತ ನ್ಯಾಯಾಲಯದಲ್ಲಿ ನಿರೀಕ್ಷಣಾ ಅರ್ಜಿ ವಜಾ ಆದರೆ ಭವಾನಿ ರೇವಣ್ಣ ಬಂಧನ ಸಾಧ್ಯತೆ ಇದೆ ಎನ್ನಲಾಗಿದೆ.

Click 👇

https://newsnotout.com/2024/05/sti-arrested-prajwal-with-lady-officers
https://newsnotout.com/2024/05/hd-kumaraswamy-went-for-resort-from-bengaluru
https://newsnotout.com/2024/05/police-and-misbehaviour-with-doubter-kannada-news
https://newsnotout.com/2024/05/police-station-and-monkey-issue-about-police

Related posts

ಆರ್ಡರ್ ಮಾಡಿದ್ದ ಐಫೋನ್‌ಗಾಗಿ ಡೆಲಿವರಿ ಬಾಯ್‌ಯನ್ನೇ ಕೊಂದ..! ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ರೋಚಕ ಮಾಹಿತಿ !

ಪರೀಕ್ಷೆ ವೇಳೆ ವಿವಾದಕ್ಕೆ ಕಾರಣವಾದ ಒಳ ಉಡುಪು ಪರಿಶೀಲನೆ! ಸಮಯ ಮೀರಿದ್ದಕ್ಕೆ ವಿದ್ಯಾರ್ಥಿಗಳ ಪರದಾಟ!

ಸುಬ್ರಹ್ಮಣ್ಯ: ಕುಮಾರಧಾರ ಸ್ನಾನ ಘಟ್ಟದಲ್ಲಿ ಮೊಸಳೆ ಪ್ರತ್ಯಕ್ಷ..! ಮೊಸಳೆಗಳಿದ್ದರೂ ನೀರಿಗಿಳಿಯಲು ಹಠ ಮಾಡುತ್ತಿರುವ ಭಕ್ತರು..!