ಕ್ರೈಂ

ಫೇಸ್ ಬುಕ್ ನಲ್ಲಿ ಪ್ರವಾದಿ ಅಶ್ಲೀಲ ನಿಂದನೆ: ಐವರ್ನಾಡಿನ ವ್ಯಕ್ತಿ ಬಂಧನ

ಸುಳ್ಯ: ಕಳೆದೊಂದು ವಾರದ ಹಿಂದೆ ಫೇಸ್ ಬುಕ್ ನಲ್ಲಿ ಪ್ರವಾದಿ ಮುಹಮ್ಮದ್ ರನ್ನು ಆಶ್ಲೀಲ ಪದಗಳಿಂದ ನಿಂದನೆಗೈದ ಆರೋಪದಲ್ಲಿ ಐವರ್ನಾಡು ಗ್ರಾಮದ ಜಗದೀಶ್ ಕೈವಲ್ತಡ್ಕ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಜಗದೀಶ್ ತನ್ನ ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿ ಪದಬಳಕೆ ಮಾಡಿ ಪ್ರವಾದಿಯನ್ನು ನಿಂದಿಸಿ ಕೋಟ್ಯಾಂತರ ಜನರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾನೆ. ಈ ಕುರಿತಂತೆ ಪೋಲಿಸರು ಕ್ರಮ ಕೈಗೊಳ್ಳಬೇಕು ಮುಸ್ಲಿಂ ಸಂಘಟನೆಗಳು ದೂರು ನೀಡಿದ್ದವು. ಆದರೆ ದೂರು ನೀಡಿ ವಾರ ಕಳೆದರೂ ಆರೋಪಿಯನ್ನು ಪೊಲೀಸರು ಬಂಧಿಸಿರಲಿಲ್ಲ. ಪೊಲೀಸರ ನಡೆಯನ್ನು ಖಂಡಿಸಿ ಸುಳ್ಯ ಮುಸ್ಲಿಂ ಒಕ್ಕೂಟದ ವತಿಯಿಂದ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಂಚಾಲಕ ಇಕ್ಬಾಲ್ ಎಲಿಮಲೆ ಮುಂದಾಳತ್ವದಲ್ಲಿ ದೂರು ನೀಡಲಾಗಿತ್ತು. ಈ ಕುರಿತು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ವರಿಷ್ಠಾಧಿಕಾರಿಗಳು ಆರೋಪಿಯನ್ನು ಬಂಧಿಸಲು ಸೂಚಿಸಿದ್ದರು. ಇದರ ಬೆನ್ನಲ್ಲೇ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.

Related posts

‘ರೌಡಿಗಳಿಗೆಲ್ಲ ಮನೆ ಬಾಡಿಗೆ ನೀಡಬೇಡಿ’ ಎಂದಿದ್ದಕ್ಕೆ ಕತ್ತಿಯಿಂದ ಕಡಿದು ಕೊಲೆಗೆ ಯತ್ನ, ಕತ್ತಿ ಹಿಡಿದು ಬಂದ ರೌಡಿ ತಲೆಮರೆಸಿಕೊಂಡಿದ್ದೆಲ್ಲಿ..?

ದರ್ಶನ್ ಪ್ರಕರಣ: ಕೈದಿ ನಂ.6106 ಸ್ಟಿಕ್ಕರ್ ಹಾಕಿಸಿದವರಿಗೆ ಕಾನೂನು ಕಂಟಕ..! ಪೊಲೀಸ್ ಇಲಾಖೆ ನೀಡಿದ ಎಚ್ಚರಿಕೆ ಏನು..?

ಬೆಂಗಳೂರಿನಲ್ಲಿ ಬಾಲಕಿ ಮೇಲೆ ಜರ್ಮನ್ ಶೆಫರ್ಡ್ ನಾಯಿ ದಾಳಿ! ಈ ತಿಂಗಳು ಬೆಂಗಳೂರಿನಲ್ಲಿ ನಡೆದ ಮೂರನೇ ಭೀಕರ ನಾಯಿ ದಾಳಿ! ಇಲ್ಲಿದೆ ವೈರಲ್ ವಿಡಿಯೋ