ಕರಾವಳಿ

ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಮತ್ತೊಂದು ಆಘಾತ

407

ನ್ಯೂಸ್ ನಾಟೌಟ್ : ಬಿಜೆಪಿ ಯುವ ಮೋರ್ಚಾ ನಾಯಕ ಹಾಗೂ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ದುಷ್ಕರ್ಮಿಗಳಿಂದ ಹತ್ಯೆಯಾಗಿ ಇನ್ನೂ ಒಂದು ತಿಂಗಳಾಗಿಲ್ಲ. ಈ ನಡುವೆ ಆ ಕುಟುಂಬಕ್ಕೆ ಮತ್ತೊಂದು ಆಘಾತ ಬಂದೆರಗಿದೆ.

ಹೌದು, ಪ್ರವೀಣ್ ನೆಟ್ಟಾರ್ ಪ್ರಾಣಿ ಪ್ರಿಯರಾಗಿದ್ದರು. ಮೂಕ ಪ್ರಾಣಿಗಳ ನೋವಿಗೆ ಸ್ಪಂದಿಸುವ ಗುಣ ಹೊಂದಿದ್ದರು. ಅಂತಹ ಪ್ರವೀಣ್ ತಮ್ಮ ಮನೆಯಲ್ಲಿ ಶ್ವಾನವೊಂದನ್ನು ಸಾಕಿದ್ದರು. ಅತ್ಯಂತ ಅಕ್ಕರೆಯಿಂದ ಸಾಕಿದ್ದ ಶ್ವಾನ ಇದೀಗ ಮೃತಪಟ್ಟಿದೆ. ಪ್ರವೀಣ್ ನಿಧನದ ಬಳಿಕ ಕಳೆದ ಕೆಲವು ದಿನಗಳಿಂದ ಈ ಶ್ವಾನ ಅನಾರೋಗ್ಯದಿಂದ ನರಳುತ್ತಿತ್ತು ಎನ್ನಲಾಗುತ್ತಿದೆ. ಇದೀಗ ಆ ಶ್ವಾನ ಸಾವನ್ನಪ್ಪಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನಮ್ಮ ಬಿಲ್ಲವೆರ್ ಪೇಜ್ ನಲ್ಲಿ ಪ್ರಕಟಿಸಲಾಗಿದೆ.

ಪ್ರವೀಣ್ ಹತ್ಯೆಗೀಡಾವುದಕ್ಕೂ ಕೆಲವೇ ದಿನಗಳ ಹಿಂದೆ ಬೀದಿಯಲ್ಲಿದ್ದ ಎರಡು ನಾಯಿ ಮರಿಗಳನ್ನು ರಕ್ಷಿಸಿದ್ದರು. ಈ ಕುರಿತಂತೆ ಅವರೇ ಜಾಲತಾಣದಲ್ಲಿ ಫೋಟೋ ಸಹಿತ ಮಾಹಿತಿ ಪ್ರಕಟಿಸಿದ್ದರು. ಒಂದು ಜೀವ ಉಳಿಸಿದ ಸಾರ್ಥಕತೆ ಎಂದು ಹೇಳಿಕೊಂಡಿದ್ದರು. ಪ್ರಾಣಿಗಳ ಮೇಲೆ ಪ್ರವೀಣ್ ಅವರಿಗೆ ಅಷ್ಟೊಂದು ಪ್ರೀತಿ ಇತ್ತು ಎನ್ನುವುದು ಇದರಿಂದ ತಿಳಿಯಬಹುದಾಗಿದೆ.

See also  30 ವರ್ಷ ಆಗದ ಕಾರ್ಕಳದ ಅಭಿವೃದ್ದಿ ಈಗ ಆಗಿದೆ, ಈ ಬಾರಿ ಸುನೀಲ್ ಕುಮಾರ್ ಬಂದರೆ ಸ್ವರ್ಣ ಕಾರ್ಕಳದ ಕನಸು ನನಸಾಗಲಿದೆ ಎಂದ ಬಿಜೆಪಿ ಮೋರ್ಚಾ ಉಪಾಧ್ಯಕ್ಷ ಸರ್ವಜ್ಞ ತಂತ್ರಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget