ಕರಾವಳಿ

ಪ್ರವೀಣ್ ಹತ್ಯೆ ಪ್ರಕರಣ: ಕೇರಳದ ವ್ಯಕ್ತಿ ವಶಕ್ಕೆ

400

ನ್ಯೂಸ್ ನಾಟೌಟ್: ಹಿಂದೂ ನಾಯಕ ಪ್ರವೀಣ್‌ ನೆಟ್ಟಾರ್‌ ಹತ್ಯೆಯ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂಬ ಸಂಶಯದಲ್ಲಿ ಕೇರಳದ ಕಣ್ಣೂರಿನ ತಲಸೇರಿಯಲ್ಲಿ ಒಬ್ಬ ವ್ಯಕ್ತಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹತ್ಯೆಯಲ್ಲಿ ಭಾಗಿಯಾಗಿರುವ ಅನುಮಾನದ ಮೇರೆಗೆ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಫೀಕ್ ಬೆಳ್ಳಾರೆ, ಝಾಕೀರ್ ಸವಣೂರು ಎಂಬ ವ್ಯಕ್ತಿಗಳನ್ನು ಸೂತ್ರಧಾರಿಗಳನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಲಾಗಿದೆ. ಅವರು ನೀಡಿದ ಮಾಹಿತಿಯ ಮೇರೆಗೆ ಇದೀಗ ಕೇರಳದಲ್ಲಿ ಹಂತಕರ ಬಂಧನ ನಡೆಸಲಾಗಿದೆ. ಮೂಲಗಳ ಪ್ರಕಾರ ಎರಡು ತಿಂಗಳ ಕಾಲ ಪ್ರವೀಣ್ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

See also  ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ, ಅನ್ಯಮತೀಯ ಜೋಡಿಗಳ ಮೇಲೆ ಹಿಂದೂ ಕಾರ್ಯಕರ್ತರ ದಾಳಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget