ಕರಾವಳಿ

ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ್ ನೆಟ್ಟಾರ್ ಪತ್ನಿ

ನ್ಯೂಸ್ ನಾಟೌಟ್: ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರು ರವರ ಪತ್ನಿ ನೂತನ ಕುಮಾರಿರವರು ಸಿಎಂ ಆದೇಶ ಹಿನ್ನೆಲೆಯಲ್ಲಿದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿ ಹುದ್ದೆಗೆ ಸೇರ್ಪಡೆಗೊಂಡಿದ್ದುಅ.13ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರರವರು ನೇಮಕಾತಿ ನೂತನರವರಿಗೆ ಪತ್ರ ನೀಡಿದರು. ನೂತನ ಕುಮಾರಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಕಚೇರಿಯಲ್ಲಿಸಿ. ಗ್ರೂಪ್ ಸರ್ಕಾರಿ ಉದ್ಯೋಗ ಲಭಿಸಿತ್ತು. ಆದರೆ ಅವರು ಮಂಗಳೂರಿನಲ್ಲೇ ಕರ್ತವ್ಯ ನಿರ್ವಹಿಸಲು ಬಯಸಿದ್ದುಈ ಹಿನ್ನೆಲೆಯಲ್ಲಿದ.ಕ. ಜಿಲ್ಲಾಕೇಂದ್ರ ಮಂಗಳೂರಿನಲ್ಲಿಸರ್ಕಾರಿ ಉದ್ಯೋ ಗ ನಡೆಸಲು ಆದೇಶದಲ್ಲಿನಿಯೋಜನೆ ಮೇರೆಗೆ ಅವಕಾಶ ನೀಡಲಾಗಿದೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಲೈಬ್ರೆರಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ನೂತನ ಕುಮಾರಿರವರು ಏಳೂವರೆ ವರ್ಷ ಕಾಲ ಪುತ್ತೂರು ಸಂತ ಫಿಲೋ ಮಿನಾ ಕಾಲೇಜು ಹಾಗೂ ಐದು ತಿಂಗಳ ಕಾಲ ಇತ್ತೂರು ವಿವೇಕಾನಂದ ಪಿಯು ಕಾಲೇಜಿನ ಗ್ರಂಥಾಲಯ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದರು. ಬೆಳಾರೆಯಲ್ಲಿ ಚಿಕನ್ ಸ್ಟಾಲ್ ಹೊಂದಿದ್ದಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಜು.26ರಂದು ದುಷ್ಕರ್ಮಿಗಳು ಹತ್ಯೆ ನಡೆಸಿದ್ದರು. ಬಳಿಕದ ಬೆಳವಣಿಗೆಯಲ್ಲಿತಮ್ಮದೇ ಸರಕಾರದ ವಿರುದ್ಧಬಿಜೆಪಿ ಕಾರ್ಯಕರ್ತರು ಅಸಮಾಧನಗೊಂ ಡಿದ್ದರು. ಹತ್ಯೆಯ ತನಿಖೆಯನ್ನು ಬಿಜೆಪಿ ಸರಕಾರ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿತ್ತು.

ನೆಟ್ಟಾರು ಸಾವಿಗೀಡಾದ ಹಿನ್ನೆಲೆಯಲ್ಲಿಅವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ಸರಕಾರಿ ಉದ್ಯೋ ಗ ಕೊಡಿಸುವ ಬಗ್ಗೆ ದ.ಕ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯರಲ್ಲಿ ಮನವಿ ಮಾಡಿದ್ದರು. ಮುಖ್ಯಮಂತ್ರಿಗಳು ಇದಕ್ಕೆ ಒಪ್ಪಿಗೆ ನೀಡಿದ್ದು ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿಪ್ರವೀಣ್ ನೆಟ್ಟಾರು ಪತ್ನಿಗೆ ಸಿಎಂ ಸಚಿವಾಲಯದಲ್ಲಿಕೆಲಸ ಕೊಡಿಸುವುದಾಗಿ ಘೋಷಣೆ ಮಾಡಿದ್ದರು.

Related posts

ಮಂಗಳೂರಿನಲ್ಲಿ ವಿದ್ಯಾರ್ಥಿನಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್..! ಅನ್ಯಕೋಮಿನ ಯುವಕನಿಂದ ಡ್ರಗ್ಸ್ ನಂಟು..?

ಉಡುಪಿ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿ ಅರೆಸ್ಟ್

ಶರಣಾಗತಿಯಾದ ನಕ್ಸಲ್ ಲತಾ ಟೀಂನಲ್ಲಿದ್ದ ರವೀಂದ್ರ ಮಿಸ್ಸಿಂಗ್..? ವಿಕ್ರಂಗೌಡ ಎನ್‍ ಕೌಂಟರ್ ಬಳಿಕ ಟೀಂ ತೊರೆದಿದ್ದ ರವೀಂದ್ರ ನಾಪತ್ತೆ..!