ನ್ಯೂಸ್ ನಾಟೌಟ್: ಗರ್ಭಿಣಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ಚಲಿಸುತ್ತಿದ್ದ ರೈಲಿನಿಂದ ಹೊರಗಸೆದಿರುವ ಹೃದಯ ವಿದ್ರಾವಕ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಕೊಯಮತ್ತೂರಿನಿಂದ ಚಿತ್ತೂರಿಗೆ ಪ್ರಯಾಣಿಸುತ್ತಿದ್ದ ಇಂಟರ್ ಸಿಟಿ ರೈಲಿನಲ್ಲಿ ನಾಲ್ಕು ತಿಂಗಳ ಗರ್ಭಿಣಿಗೆ ಪುರುಷರ ಗುಂಪೊಂದು ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ಆಕೆಯನ್ನು ರೈಲಿನಿಂದ ಎಸೆದಿದ್ದಾರೆ. ರೈಲಿನ ಮಹಿಳಾ ಬೋಗಿಯಲ್ಲಿ ಈ ಘಟನೆ ನಡೆದಿದೆ.
ಮಹಿಳೆ ಕೊಯಮತ್ತೂರಿನಲ್ಲಿ ರೈಲು ಹತ್ತಿದ್ದಳು, ಜೋಲಾರ್ಪೇಟೆಯಲ್ಲಿ ಹತ್ತಿದ ಪುರುಷರ ಗುಂಪೊಂದು ಗರ್ಭಿಣಿಗೆ ತೊಂದರೆ ಕೊಟ್ಟಿದೆ. ಆಕೆ ಅವರ ಬಳಿ ಹೊರ ಹೋಗುವಂತೆ ಕೇಳಿಕೊಂಡರೂ ಕೂಡ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ತಿರುಪ್ಪೂರು ಜಿಲ್ಲೆಯ ಅವಿನಾಶಿ ಎಂಬಲ್ಲಿಯ ಮಹಿಳೆ ಕೊಯಮತ್ತೂರಿನಿಂದ ತಿರುಪತಿಗೆ ತೆರಳುತ್ತಿದ್ದಾಗ ವೆಲ್ಲೂರು ಜಿಲ್ಲೆಯ ಕೆವಿ ಕುಪ್ಪಂ ಬಳಿ ರೈಲಿನಲ್ಲಿ ಈ ಘಟನೆ ಸಂಭವಿಸಿದೆ.
ಆಕೆ ಸಹಾಯಕ್ಕಾಗಿ ಕಿರುಚಿದಾಗ, ದುಷ್ಕರ್ಮಿ ಯಾವುದೇ ಕರುಣೆ ತೋರಿಸದೆ ಆಕೆಯನ್ನು ರೈಲಿನಿಂದ ಕ್ರೂರವಾಗಿ ಎಸೆದಿದ್ದಾನೆ. ಸಹಾಯಕ್ಕಾಗಿ ಮಹಿಳೆಯ ಕೂಗು ಕೇಳಿ ದಾರಿಹೋಕರು ಧಾವಿಸಿ ಬಂದು ಆಕೆಯನ್ನು ರಕ್ಷಿಸಿ ವೆಲ್ಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಮಹಿಳೆಯ ಕೈ ಮತ್ತು ಕಾಲುಗಳಲ್ಲಿ ಮೂಳೆ ಮುರಿತಗಳಾಗಿದ್ದು, ತೀವ್ರ ಬಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಮಹಿಳೆಯ ಗುರುತಿನ ಆಧಾರದ ಮೇಲೆ ಕೆ.ವಿ. ಕುಪ್ಪಂ ಪ್ರದೇಶದ ಪೂಂಚೋಲೈ ಗ್ರಾಮದ ಹೇಮರಾಜ್ ಎಂಬ ಯುವಕನನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.