Latest

ಉಪ್ಪಿನಂಗಡಿ:ನೀರಕಟ್ಟೆ ಬಜತ್ತೂರು ಬಲಿ ಖಾಸಗಿ ಬಸ್ ಪಲ್ಟಿ!!ಓರ್ವ ಮೃತ್ಯು,ಹಲವರಿಗೆ ಗಾಯ!

604

ನ್ಯೂಸ್‌ ನಾಟೌಟ್:ಉಪ್ಪಿನಂಗಡಿ ಸಮೀಪದ ಬಜತ್ತೂರು ಎಂಬಲ್ಲಿ ಭೀಕರ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿದ್ದು ಓರ್ವ ಪ್ರಯಾಣಿಕ ಮೃತಪಟ್ಟು ೧೧ ಮಂದಿ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಘಟನೆ ಎ.4 ರಂದು ಮುಂಜಾನೆ ಸಂಭವಿಸಿದೆ.

ಮೃತಪಟ್ಟವರನ್ನು ಬೆಂಗಳೂರು, ಯಡಿಯೂರು ನಿವಾಸಿ ಹರ್ಷ (24) ಎಂದು ಗುರುತಿಸಲಾಗಿದೆ. ಅವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮುಲ್ಕಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.ಅಪಘಾತದಲ್ಲಿ ಗಾಯಗೊಂಡವರು ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಘಟನಾ ಸ್ಥಳಕ್ಕೆ ಪುತ್ತೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಬಸ್ಸ್ ಅನ್ನು ಕ್ರೈನ್ ಬಳಸಿ ಮೇಲಕ್ಕೆತ್ತಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಉಪ್ಪಿನಂಗಡಿ: ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ KSRTC ಬಸ್ ಡಿವೈಡರ್‌ ಗೆ ಡಿಕ್ಕಿ..! 3 ಪ್ರಯಾಣಿಕರಿಗೆ ಗಂಭೀರ ಗಾಯ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget