ಕರಾವಳಿಬೆಂಗಳೂರು

ಬೆಂಗಳೂರು: ಹಿಜಾಬ್ ಧರಿಸಿ ಪಿಯುಸಿ ಪರೀಕ್ಷೆ ಬರೆಯಲು ಪಟ್ಟುಹಿಡಿದ ವಿದ್ಯಾರ್ಥಿನಿ! ಕೊನೆಗೂ ನಿರ್ಧಾರ ಬದಲಿಸಲು ಕಾರಣವೇನು?

254

ನ್ಯೂಸ್ ನಾಟೌಟ್: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರದೊಳಗೆ ಹೋಗುವಂತಿಲ್ಲ ಎಂದು ಕೋರ್ಟ್ ನಿರ್ದೇಶನವನ್ನು ಆಧರಿಸಿ ಕಠಿಣ ನಿಯಮವನ್ನು ರಾಜ್ಯ ಸರ್ಕಾರ ಆದೇಶಿಸಿತ್ತು. ಆದರೂ ಬೆಂಗಳೂರು ನಗರದ ಮಲ್ಲೇಶ್ವರಂನ ಕಾಲೇಜುವೊಂದರಲ್ಲಿ ವಿದ್ಯಾರ್ಥಿನಿಯೊಬ್ಬರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಹಾಜರಾದದ್ದು ವಿವಾದಕ್ಕೆ ಕಾರಣವಾಗಿತ್ತು.

ಇದನ್ನು ಗಮನಿಸಿದ ಕಾಲೇಜು ಪ್ರಾಂಶುಪಾಲರು ಹಿಜಾಬ್ ತೆಗೆಯುವಂತೆ ವಿದ್ಯಾರ್ಥಿನಿಗೆ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ ಪರೀಕ್ಷೆ ಶುರುವಾಗಲು ಕೆಲವೇ ಸಮಯವಿದ್ದರೂ ಆ ವಿದ್ಯಾರ್ಥಿನಿ ಹಿಜಾಬ್ ತೆಗೆಯದೇ ಹಾಗೇ ಕುಳಿತ್ತಿದ್ದಳು.

ಕಾಲೇಜು ಆಡಳಿತ ಮಂಡಳಿಯು ಆಕೆಗೆ ಮನವರಿಕೆ ಮಾಡಲು ಪ್ರಯತ್ನಿಸಿದೆ, ಕೆಲವು ಸಮಯಗಳ ನಂತರ ಸರ್ಕಾರದ ನಿಯಮದ ಅನ್ವಯ ಕೊನೆಗೂವಿದ್ಯಾರ್ಥಿನಿ ಹಿಜಾಬ್ ತೆಗೆದು ಪರೀಕ್ಷೆಗೆ ಹಾಜರಾಗಿದ್ದಾಳೆ.

See also  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದಲೇ ವಾರಾಂತ್ಯ ಕಫ್ಯೂ ಜಾರಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget