ಕ್ರೀಡೆ/ಸಿನಿಮಾ

ಅಪ್ಪು ಅಗಲಿಕೆಗೆ ಇಂದಿಗೆ ಭರ್ತಿ 3 ವರ್ಷ, ಅಪ್ಪು ಸಮಾಧಿ ದರ್ಶನಕ್ಕೆ ಬರುವ ಅಭಿಮಾನಿಗಳಿಗಾಗಿ ಅನ್ನದಾನ

ನ್ಯೂಸ್‌ ನಾಟೌಟ್‌ : ಆ ದಿನವನ್ನು ಯಾರು ಮರೆಯಲಾರರು.ಇಡೀ ಕರ್ನಾಟಕವೇ ಶೋಕ ಸಾಗರದಲ್ಲಿ ಮುಳುಗಿತ್ತು.ನಗುವಿನ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಇನ್ನಿಲ್ಲ ಅನ್ನೋ ಸುದ್ದಿ ಎಲ್ಲರಲ್ಲೂ ಕಣ್ಣೀರು ತರಿಸಿತ್ತು.ಇದೀಗ ಎಲ್ಲರ ಅಚ್ಚು ಮೆಚ್ಚಿನ ಅಪ್ಪು ನಮ್ಮೆಲ್ಲರನ್ನ ಅಗಲಿ ಭರ್ತಿ ಮೂರು ವರ್ಷಗಳಾಗಿವೆ. 3 ವರ್ಷವಲ್ಲ, ಇನ್ನೂ ನೂರು ವರ್ಷ ಕಳೆದರೂ ಅಪ್ಪು (Appu) ಎಂದಿಗೂ ಮರೆಯಲಾಗದ ಮಾಣಿಕ್ಯ. 3ನೇ ವರ್ಷದ ಅಪ್ಪು ಪುಣ್ಯ ಸ್ಮರಣೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಬಂದು ಭಾಗಿಯಾಗಿದ್ದಾರೆ.

ನಗುಮೊಗದ ಒಡೆಯ ಪುನೀತ್‌ ಸ್ಟಾರ್ ಹಮ್ಮು ಬಿಮ್ಮಿಲ್ಲದ ವ್ಯಕ್ತಿತ್ವ. ಎಲ್ಲರನ್ನೂ ತನ್ನವರೆಂದು ಬಾಚಿ ತಬ್ಬಿಕೊಳ್ಳುತ್ತಿದ್ದರು.ಅನೇಕರಿಗೆ ಸಹಾಯವನ್ನೂ ಮಾಡಿದ್ದರು.ಬಡವರೆಂದರೆ ಮರುಗುವ ಹೃದಯ ಇವರದ್ದು, ಹೀಗಾಗಿಯೇ ಅವರನ್ನು ಎಲ್ಲರೂ ಪ್ರೀತಿಯಿಂದ ಅಪ್ಪು ಎಂದೇ ಕರೆಯುತ್ತಿದ್ದರು. ಅಪ್ಪು ಕಳೆದುಕೊಂಡು ಇಂದಿಗೆ ಭರ್ತಿ ಮೂರು ವರ್ಷಗಳಾದರೂ, ಇಂದಿಗೂ ಕೂಡಾ ಅವರನ್ನು ಕಳೆದುಕೊಂಡ ದುಃಖ ಮಾತ್ರ ಅವರ ಅಭಿಮಾನಿಗಳ ಎದೆಯಿಂದ ಮಾಸಿಲ್ಲ.ಅಪ್ಪು 3ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಪತ್ನಿ ಅಶ್ವಿನಿ, ರಾಘವೇಂದ್ರ ರಾಜ್‌ಕುಮಾರ್, ವಿನಯ್  ರಾಜ್‌ಕುಮಾರ್, ಯುವರಾಜ್ ಕುಮಾರ್, ಅಪ್ಪು ಪುತ್ರಿಯರು ಭಾಗಿಯಾಗಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಇಷ್ಟದ ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸಲಾಗಿದೆ.ಸಮಾಧಿಯನ್ನ ವಿಶೇಷವಾಗಿ ಹೂವುಗಳಿಂದ, ದೀಪಗಳಿಂದ ಅಲಂಕಾರ ಮಾಡಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳ ದಂಡು ಅಪ್ಪು ಸಮಾಧಿ ಬಳಿ ಜಮಾಯಿಸಿ ನೆಚ್ಚಿನ ನಟನಿಗೆ ನಮನ ಸಲ್ಲಿಸುತ್ತಿದ್ದಾರೆ.

ಅಪ್ಪು ಇಲ್ಲ ಎಂದು ಅವರ ಅಭಿಮಾನಿಗಳು ಸುಮ್ಮನೆ ಕುಳಿತಿಲ್ಲ. ಅವರ ಹೆಸರಿನಲ್ಲಿ ಸಾಕಷ್ಟು ಪುಣ್ಯದ ಕೆಲಸಗಳನ್ನು ವರ್ಷಪೂರ್ತಿ ಮಾಡುತ್ತಿದ್ದಾರೆ. ಇಂದು ಪುಣ್ಯ ಸ್ಮರಣೆ ವಿಶೇಷವಾಗಿ ಕಂಠೀರವ ಸ್ಟುಡಿಯೋದಲ್ಲಿ ಹಾಗೂ ರಾಜ್ಯದ ಮೂಲೆ ಮೂಲೆಗಳಲ್ಲೂ ಅನ್ನದಾನ, ರಕ್ತದಾನ ಶಿಬಿರಗಳು ನಡೆಯುತ್ತಿವೆ. ಅಷ್ಟೇ ಅಲ್ಲದೇ ಇತ್ತೀಚೆಗೆ ಅಪ್ಪು ಅಭಿಮಾನಿ ಯಲಗಚ್ಚಿನಲ್ಲಿ ಗುಡಿಯೊಂದನ್ನ ಕಟ್ಟಿ ಅಭಿಮಾನ ಮೆರೆದಿದ್ದಾನೆ. ಅಲ್ಲೂ ಕೂಡಾ ಇಂದು ವಿಶೇಷ ಪೂಜೆ ನಡೆಯಲಿದೆ.

Related posts

‘ಕಾಂತಾರ 2’ ಬ್ಯಾನ್! ತುಳುವರ ಆಕ್ರೋಶಕ್ಕೆ ಇಲ್ಲಿದೆ ಕಾರಣ!

ನಟಿ ರಮ್ಯ ಜತೆ ತಮಿಳ್ ನಟ ಧನುಷ್ ಫೋಟೋ ವೈರಲ್‌, ಫ್ಯಾನ್ಸ್‌ ಹೇಳೋದೇನು?

ದಾಖಲೆ ಬರೆದ ಆರ್ ಆರ್ ಆರ್, ಆಸ್ಕರ್ ಗೆದ್ದ ಆ ಹಾಡು ಯಾವುದು?