ಕರಾವಳಿ

ಸುಳ್ಯ ತಾಲೂಕಿನ ಸಾಹಿತ್ಯ ಪ್ರಿಯರಿಗೆ ಸಂಭ್ರಮದ ದಿನ, ವಿಧಾನಸೌಧದಲ್ಲಿ ಇಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಾ. ಪುರುಷೋತ್ತಮ ಬಿಳಿಮಲೆ

143

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ವಿಚಾರಕ್ಕೆ ಸಂಬಂಧಪಟ್ಟಂತೆ ಹೆಮ್ಮೆಯ ಕ್ಷಣ ಅನ್ನಬಹುದು.

ಜೂನ್ 13 ರಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಪಂಜ ಗ್ರಾಮದ ಡಾ. ಪುರುಷೋತ್ತಮ ಬಿಳಿಮಲೆ ಅವರು ವಿಧಾನಸೌಧದಲ್ಲಿ ಅಧಿಕಾರ ಸ್ವೀಕರಿಸಿದರು.

ಬಾಲ್ಯದಿಂದಲೂ ತನ್ನದೇ ಆದ ವಿಚಾರಧಾರೆಯೊಂದಿಗೆ ಬದುಕನ್ನು ಕಟ್ಟಿಕೊಂಡ ಡಾ. ಪುರುಷೋತ್ತಮ ಬಿಳಿಮಲೆ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕೂತ್ಕುಂಜ ಶಾಲೆಯಲ್ಲಿ ಪಡೆದುಕೊಂಡರು. ಪಂಜ ಹಾಗೂ ಪುತ್ತೂರಿನಲ್ಲಿ ಕಾಲೇಜು ಅಭ್ಯಾಸ ನಡೆಸಿದರು. ಮದ್ರಾಸ್ ವಿಶ್ವವಿದ್ಯಾನಿಲಯದಿಂದ ಮೊದಲ ಶ್ರೇಣಿಯಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದರು. ಸುಳ್ಯ, ಮಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗದಲ್ಲಿ ಉಪನ್ಯಾಸಕರಾಗಿ ಹಾಗೂ ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ. ಬಂಡಾಯ ದಲಿತ ಸಾಹಿತ್ಯ, ಕಂಬುಳ, ಕರಾವಳಿ ಜಾನಪದ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚಿನ ಪುಸ್ತಕಗಳನ್ನು ಬರೆದಿದ್ದಾರೆ.

2013ರಲ್ಲಿ ಅವರ ಸಾಧನೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಂದಿದ್ದನ್ನು ಸ್ಮರಿಸಬಹುದು. ದೆಹಲಿ ಕನ್ನಡ ಸಂಘಕ್ಕೆ ಎರಡು ಅವಧಿಗೆ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ ಅನ್ನೋದು ವಿಶೇಷ.

See also  ಇಂದಿನಿಂದ(ಜ.2) ಕೋವಿಡ್ ವ್ಯಾಕ್ಸಿನೇಷನ್ ಮತ್ತೆ ಆರಂಭ..! ದಕ್ಷಿಣ ಕನ್ನಡ, ಉಡುಪಿಗೆ ಎಷ್ಟು ಡೋಸ್..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget