ಪುತ್ತೂರು

ಪುತ್ತೂರು: ತೆಂಗಿನ ಕಾಯಿ ಕೀಳಲು ಮರವೇರಿದ ಯುವತಿ ಮರದಿಂದ ಬಿದ್ದು ಸಾವು

208

ನ್ಯೂಸ್‌ ನಾಟೌಟ್‌: ತೆಂಗಿನ ಕಾಯಿ ಕೀಳುವ ಕಾಯಕದಲ್ಲಿ ಪರಿಣತಿ ಪಡೆದಿದ್ದ ಮಹಿಳೆಯೊಬ್ಬರು ಕಾಯಿ ಕೀಳುವಾಗ ತೆಂಗಿನ ಮರದಿಂದ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ಸಂಭವಿಸಿದೆ.

ಮೃತ ಮಹಿಳೆಯನ್ನು ಸುಚಿತ್ರ (30) ಎಂದು ಗುರುತಿಸಲಾಗಿದೆ. ಮೃತರು ಪತಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಸುಚಿತ್ರ ಅವರು ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದರು. ಸುಚಿತ್ರ ಅವರ ಈ ಕಾರ್ಯಕ್ಕೆ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿದ್ದವು.

See also  ಪುತ್ತೂರು: ಅರುಣ್‌ ಪುತ್ತಿಲ ವಿರುದ್ಧ ಬೆಟ್ಟಿಂಗ್‌ ಕಟ್ಟಿ ಕೋಟ್ಯಂತರ ರೂಪಾಯಿ ಕಳೆದುಕೊಂಡ ಬಿಜೆಪಿ ಫ್ಯಾನ್ಸ್‌...!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget