ಕರಾವಳಿಕ್ರೈಂಪುತ್ತೂರು

ಪುತ್ತೂರು: ಅನ್ಯಕೋಮಿನ ಯುವಕನಿಂದ ಯುವತಿಗೆ ಕಿರುಕುಳ, ಓರ್ವ ಅರೆಸ್ಟ್, ಪೊಲೀಸ್ ಠಾಣೆ ಎದುರು ಜಮಾಯಿಸಿದ ಉದ್ರಿಕ್ತರ ಗುಂಪು

158

ನ್ಯೂಸ್ ನಾಟೌಟ್ : ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕನಿಂದ ಕಿರುಕುಳ ಪ್ರಕರಣವೊಂದು ಪುತ್ತೂರಿನಲ್ಲಿ ನಡೆದಿದೆ. ಕಡಬ ಮೂಲದ ವ್ಯಕ್ತಿಯಿಂದ ಬಾಲಕಿಗೆ ಕಿರುಕುಳ ಎಂದು ತಿಳಿದು ಬಂದಿದೆ.

ಪುತ್ತೂರು ಕಂಬಳ ವೀಕ್ಷಿಸಲು ತೆರಳುತ್ತಿದ್ದ ವೇಳೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಇದೇ ವೇಳೆ ತಪ್ಪಿತಸ್ಥನಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಉದ್ರಿಕ್ತರ ಗುಂಪು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಪ್ರಸಂಗವೂ ನಡೆದಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಶಾರಿಖ್ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಆರೋಪಿಯನ್ನು ತಮಗೆ ಒಪ್ಪಿಸುವಂತೆ ಠಾಣೆಯ ಎದುರು ಜಮಾವಣೆಗೊಂಡಿದ್ದ ಹಲವು ಮಂದಿ ಒತ್ತಾಯಿಸಿದ ಘಟನೆ ಕೂಡ ನಡೆಯಿತು.

ಸದ್ಯ ಆರೋಪಿ ಶಾರೀಕ್ ಬಂಧಿಸಿ ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಪರಿಸ್ಥಿತಿ ತಿಳಿಗೊಳಿಸುವುದಕ್ಕಾಗಿ ಪೊಲೀಸರು ಠಾಣೆ ಎದುರು ಜಮಾಯಿಸಿದ್ದ ಗುಂಪನ್ನು ಚದುರಿಸಿದರು.

See also  ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ನೂತನ ಅಧ್ಯಕ್ಷರಾಗಿ ಭಾಸ್ಕರ ದೇವಸ್ಯ ಅವಿರೋಧ ಆಯ್ಕೆ, ಉಪಾಧ್ಯಕ್ಷರಾಗಿ ಸಂಜೀವ ಅಡ್ಯಾರ್ ಆಯ್ಕೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget