ಕರಾವಳಿಕ್ರೈಂಪುತ್ತೂರುವೈರಲ್ ನ್ಯೂಸ್

ಪುತ್ತೂರು: ಲಾರಿಯ ಟಯರ್‌ ಬದಲಿಸುವಾಗ ಸ್ಪೋಟ..! ವ್ಯಕ್ತಿ ಗಂಭೀರ, ಆಸ್ಪತ್ರೆಗೆ ದಾಖಲು..!

184

ನ್ಯೂಸ್ ನಾಟೌಟ್: ಲಾರಿಯೊಂದರ ಟಯರ್‌ ಬದಲಿಸುವಾಗ ಡಿಸ್ಕ್ ಚಿಮ್ಮಿ ಟಯರ್‌ ಸಮೇತ ಸ್ಪೋಟಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ (ಜು.22 ) ರಾತ್ರಿ ನಡೆದಿದೆ.

ಘಟನೆಯಲ್ಲಿ ಕಾಂಪೌಂಡ್‌ ಗೆ ಎಸೆಯಲ್ಪಟ್ಟು ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ ಕರಾಯದ ಜನತಾ ಕಾಲನಿ ನಿವಾಸಿ ರಶೀದ್ ಎಂದು ಗುರುತಿಸಲಾಗಿದೆ.

ಪಂಚರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್‌ ತಂದಿದ್ದರು. ಟಯರ್‌ ಬದಲಿಸುವ ವೇಳೆ ಒಮ್ಮೆಲೇ ಟಯರ್‌ನ ರಿಂಗ್ ಹೊರಚಿಮ್ಮಿದೆ. ರಭಸಕ್ಕೆ ಟಯರ್‌ ಸಹಿತ ರಶೀದ್ ತುಸು ದೂರ ಕಾಂಪೌಂಡ್‌ ಗೆ ಎಸೆಯಲ್ಪಟ್ಟಿದ್ದಾರೆ. ತೀವ್ರ ಗಾಯಗೊಂಡ ರಶೀದ್‌ ನನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆತಂದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎನ್ನಲಾಗಿದೆ.

Click

https://newsnotout.com/2024/07/railway-kannada-news-dddk-viral-press-release-kannada-news-travellers/
See also  ಪುತ್ತೂರು: ತಡರಾತ್ರಿ ಕಲ್ಲೇಗ ಟೈಗರ್ಸ್ ಹುಲಿ ಕುಣಿತ ತಂಡದ ನಾಯಕನ ಕೊಚ್ಚಿ ಕೊಲೆ..! ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget