ಕರಾವಳಿರಾಜಕೀಯ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ನೂತನ ಶಾಸಕ ಅಶೋಕ್ ಕುಮಾರ್ ರೈ, ಅಭಿಮಾನಿಗಳಿಂದ ಭರ್ಜರಿ ಸ್ವಾಗತ

200

ನ್ಯೂಸ್ ನಾಟೌಟ್ : ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಗೆದ್ದ ಬಳಿಕ ಶನಿವಾರ ಸಂಜೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಅಶೋಕ್ ಕುಮಾರ್ ರೈ ಅವರಿಗೆ ಕಬಕದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಅಲ್ಲಿಂದ ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದರು. ಅಲ್ಲಿಯೂ ಅಶೋಕ್ ಕುಮಾರ್ ರೈ ಅವರ ದೊಡ್ಡ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದು, ಎಲ್ಲರೂ ಶುಭಕೋರಿ ಹಾರೈಸಿದರು.

ತಮ್ಮ ನೆಚ್ಚಿನ ನಾಯಕ ಶಾಸಕರಾಗಿ ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕಾರ್ಯಕರ್ತರು ಹಾಗೂ ಮುಖಂಡರು, ಹೂವಿನ ಹಾಕಿ, ಸಿಹಿ ಹಂಚಿ ಸಂಭ್ರಮಿಸಿದರು ಎಂದು ವರದಿ ತಿಳಿಸಿದೆ.

See also  ಉಳ್ಳಾಲ: ಭಾರಿ ಸಿಡಿಲಿಗೆ ದಿನಸಿ ಅಂಗಡಿ ಸುಟ್ಟು ಭಸ್ಮ..! ಕಟ್ಟಡದಲ್ಲೇ ಇದ್ದ ಮನೆಗೂ ಬೆಂಕಿ, ವಿಡಿಯೋ ವೀಕ್ಷಿಸಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget