ನ್ಯೂಸ್ ನಾಟೌಟ್ : ರೈಲಿನಡಿಗೆ ಬಿದ್ದು ಅಪರಿಚಿತ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿರುವ ವಿಚಾರ ಇಂದು ಬೆಳಗ್ಗೆ ಪುತ್ತೂರಿನ ಮುರ ಎಂಬಲ್ಲಿ ಬೆಳಕಿಗೆ ಬಂದಿದೆ.
ಮೃತಪಟ್ಟವರನ್ನು ಕನ್ಯಾನ ಮೂಲದವರು ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಖಚಿತ ಮಾಹಿತಿ ದೊರಕಿಲ್ಲ. ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹದ ಕೈ, ಕಾಲುಗಳು ರೈಲು ಸಂಚರಿಸಿದ್ದರಿಂದ ಪೀಸ್..ಪೀಸ್ ಆಗಿದೆ ಎಂದು ತಿಳಿದು ಬಂದಿದೆ.