ಕರಾವಳಿಪುತ್ತೂರು

ಪುತ್ತೂರು:ಕಾರು-ಸ್ಕೂಟಿ ಮಧ್ಯೆ ಭೀಕರ ಅಪಘಾತ,ಸ್ಕೂಟಿ ಸವಾರ ದುರಂತ ಅಂತ್ಯ

250

ನ್ಯೂಸ್ ನಾಟೌಟ್ : ಕಾರು ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಕಲ್ಲರ್ಪೆಯಲ್ಲಿ ಮುಂಜಾನೆ ಸುಮಾರು 7 ಗಂಟೆ ಸಮಯಕ್ಕೆ ಸಂಭವಿಸಿದೆ.ಸ್ಕೂಟಿ ಸವಾರ ನೈತಾಡಿಯ ಇಸ್ಮಾಯಿಲ್ ಮೃತ ದುರ್ದೈವಿ.

ಇಸ್ಮಾಯಿಲ್ ಅವರು ಬೆಳಗ್ಗಿನ ವೇಳೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.ಈ ವೇಳೆ ಇವರಿದ್ದ ಸ್ಕೂಟಿಗೆ ಎದುರು ಭಾಗದಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಸ್ಕೂಟರ್‌ ನಜ್ಜುಗುಜ್ಜಾಗಿದ್ದು,ಈ ಸಂದರ್ಭ ಗಂಭೀರ ಗಾಯಗೊಂಡಿದ್ದ ಗಾಯಾಳುವನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು.ಆ ವೇಳೆಗಾಗಲೇ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆಂದು ವರದಿಯಾಗಿದೆ.

ಅಪಘಾತಕ್ಕೊಳಗಾದ ಕಾರು ಮಡಿಕೇರಿ ನೋಂದಾವಣಿಯದ್ದು ಎನ್ನಲಾಗಿದೆ.ಮೃತ ಇಸ್ಮಾಯಿಲ್ ಅವರು ಪತ್ನಿ, ಮೂವರು ಹೆಣ್ಣು ಮಕ್ಕಳು ಮತ್ತು ಓರ್ವ ಮಗನನ್ನು ಅಗಲಿದ್ದಾರೆ.

See also  ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಸಿಂಹಪ್ರಿಯ ಭೇಟಿ,ನೆಚ್ಚಿನ ನಟ-ನಟಿಯನ್ನು ಕಂಡು ಫೋಟೋ ಕ್ಲಿಕ್ಕಿಸಿಕೊಂಡ ಜನ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget