ಬೆಂಗಳೂರುರಾಜಕೀಯ

ಮೇ.8ಕ್ಕೆ ಪುತ್ತೂರಿಗೆ ಖ್ಯಾತ ಚಿತ್ರ ನಟಿ ರಮ್ಯಾ ಆಗಮನ, 25 ಸಾವಿರ ಮಂದಿ ಭಾಗಿ ನಿರೀಕ್ಷೆ-ಅಶೋಕ್ ಕುಮಾರ್ ರೈ

211

ನ್ಯೂಸ್ ನಾಟೌಟ್ :ಮೇ ೮ಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಟಿ ಹಾಗೂ ಮೋಹಕ ತಾರೆ ರಮ್ಯಾ ಆಗಮಿಸಲಿದ್ದಾರೆ.ಕಾಂಗ್ರೆಸ್ ಮತಯಾಚನೆ ರ್‍ಯಾಲಿಯು ಪುತ್ತೂರಿನ ಬೊಳುವಾರಿನಿಂದ ದರ್ಬೆ ತನಕ ನಡೆಯಲಿದ್ದು ಚಿತ್ರ ನಟಿ ರಮ್ಯಾ ಅವರು ರ್‍ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಭಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಗೆಲುವಾಗುವುದು ನಿಶ್ಚಿತ ಎಂದ ಅವರು ನಾವು ಬಹುಮತದಿಂದ ಗೆದ್ದು ಬರಲಿದ್ದೇವೆ ಎಂದರು.ರ್‍ಯಾಲಿಯಲ್ಲಿ ಸರಿಸುಮಾರು 25 ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ ಎಂದ ಅವರು ಮೇ 7 ಕ್ಕೆ ವಿಟ್ಲ, ಉಪ್ಪಿನಂಗಡಿಯಲ್ಲೂ ರ್‍ಯಾಲಿ ನಡೆಯಲಿದೆ ಎಂದರು.


ಪ್ರಣಾಳಿಕೆ ಪ್ರಕಾರ ಪುತ್ತೂರಿಗೆ ಮೆಡಿಕಲ್ ಕಾಲೇಜು, ಕುಡಿಯುವ ನೀರು, ಕೊಯಿಲದಲ್ಲಿ ಎನಿಮಲ್ ಹಬ್, ಪೊಲ್ಟ್ರಿಇಂಡಸ್ಟ್ರೀಸ್, ಕುರಿಗಳ ಸಾಕಾಣಿಕೆ, 20 ಸಾವಿರ ಉದ್ಯೋಗವಕಾಶ ಮಾಡಲಿದ್ದೇವೆ. ಪುತ್ತೂರಿನಲ್ಲಿ ಅವಶ್ಯಕವಾಗಿರುವ ಡ್ರೈನೇಜ್ ಫೆಸಿಲಿಟಿ, 94 ಸಿಯಲ್ಲಿ ಬಾಕಿ ಇರುವ 3800 ಫೈಲ್ ಪೆಂಡಿಂಗ್ ಆಗಿರುವುದಕ್ಕೆ ಕ್ರಮ ಮಾಡಲಿದ್ದೇವೆ ಎಂದು ಹೇಳಿದರು.ಈ ವೇಳೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ್ ರೈ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್, ಕ್ಷೇತ್ರದ ಪ್ರಚಾರ ಸಮಿತಿ‌ ಅಧ್ಯಕ್ಷ ಭಾಸ್ಕರ್ ರೈ ಕೋಡಿಂಬಾಳ, ವಕ್ತಾರ ಅಮಳ ರಾಮಚಂದ್ರ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

See also  'ಹುಡುಗಿಯರ ಟಾಯ್ಲೆಟ್‌ನಲ್ಲಿ ವಿಡಿಯೋ ಪ್ರಕರಣ, ತನಿಖೆ ಸಾಗುತ್ತಿರುವ ರೀತಿ ನೋಡಿದ್ರೆ ಸಂಶಯ ಬರುತ್ತೆ' ಮಂಗಳೂರಿನಲ್ಲಿ ಶಾಸಕ ಭರತ್ ಶೆಟ್ಟಿ ಹೇಳಿಕೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget